ಕರ್ನಾಟಕ

karnataka

By ETV Bharat Karnataka Team

Published : Jan 16, 2024, 7:15 AM IST

Updated : Jan 16, 2024, 8:45 AM IST

ETV Bharat / state

ಚಾಮರಾಜನಗರ: ಪ್ರತ್ಯೇಕ ಘಟನೆಗಳಲ್ಲಿ 7 ಮಂದಿ ಸಾವು

ಚಾಮರಾಜನಗರ ಜಿಲ್ಲೆಯಲ್ಲಿ ಸೋಮವಾರ ನಡೆದ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ.

death
ವ್ಯಕ್ತಿ ಸಾವು

ಚಾಮರಾಜನಗರ:ವ್ಯಕ್ತಿಯೊಬ್ಬರು ಪೊಲೀಸ್​ ದಾಳಿ ಭೀತಿಯಲ್ಲಿ ಓಡುತ್ತಿದ್ದ ಸಂದರ್ಭದಲ್ಲಿ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಕೆಂಪನಪುರದಲ್ಲಿ ಸೋಮವಾರ ನಡೆದಿದೆ. ಮೃತರನ್ನು ಬಸವರಾಜು (62) ಎಂದು ಗುರುತಿಸಲಾಗಿದೆ. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಕೆರೆ ಏರಿ ಸಮೀಪ ಪಾನಗೋಷ್ಠಿ ಮಾಡುತ್ತಿದ್ದಾಗ ಪೊಲೀಸರನ್ನು ಕಂಡು ಅವರು ಹೆದರಿ ಓಡಿದ್ದಾರೆ. ಈ ವೇಳೆ ಹೃದಯಾಘಾತವಾಗಿ ಮೃತಪಟ್ಟರು ಎಂದು ತಿಳಿದುಬಂದಿದೆ.

ಸಂತೋಷಕೂಟ ಮಾಡುವವರನ್ನು ಜೂಜಾಟ ಆಡುತ್ತಿದ್ದಾರೆಂದು ಪೊಲೀಸರು ಓಡಿಸಿಕೊಂಡು ಹೋಗಿದ್ದರಿಂದ ಹೃದಯಾಘಾತದಿಂದ ಬಸವರಾಜು ನಿಧನರಾಗಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಸ್ಥಳಕ್ಕೆ ಸಂತೇಮರಹಳ್ಳಿ ಪಿಐ ಮತ್ತು ಪಿಎಸ್ಐ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊಳ್ಳೇಗಾಲದಲ್ಲಿ ಭೀಕರ ಅಪಘಾತ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಅಸುನೀಗಿದ ಘಟನೆ ಕೊಳ್ಳೇಗಾಲದಲ್ಲಿ ನಡೆಯಿತು. ಕೊಳ್ಳೇಗಾಲ ಪಾಳ್ಯ ಗ್ರಾಮದ ಸಂತೋಷ್​ (32), ಸೌಮ್ಯ (27) ದಂಪತಿ ಹಾಗೂ ಇವರ ಮಕ್ಕಳಾದ ನಿತ್ಯಸಾಕ್ಷಿ (4), ಅಭಿ (9) ಸಾವನ್ನಪ್ಪಿದ್ದಾರೆ.

ಹಬ್ಬಕ್ಕೆ ಬಟ್ಟೆ ಖರೀದಿಸಲು ಕೊಳ್ಳೇಗಾಲಕ್ಕೆ ಸಂತೋಷ್ ಕುಟುಂಬ ಬೈಕ್​ನಲ್ಲಿ ತೆರಳುತ್ತಿದ್ದಾಗ ಜಿನಕನಹಳ್ಳಿ ಸಮೀಪ ಭತ್ತ ಕತ್ತರಿಸುವ ಯಂತ್ರ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್​ನಿಂದ ನಾಲ್ವರು ಕೆಳಕ್ಕೆ ಬಿದ್ದು, ಸ್ಥಳದಲ್ಲೇ ಮೂವರು ಅಸುನೀಗಿದರು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಸಾವನ್ನಪ್ಪಿದ್ದಾನೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ ಅಪಘಾತದಲ್ಲಿ ಇಬ್ಬರು ಸಾವು:ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಯುವಕನೋರ್ವ ಗಾಯಗೊಂಡ ಘಟನೆ ಹನೂರು ತಾಲೂಕಿನ ದೊಡ್ಡಲಾತ್ತೂರು ಬಳಿ ಸೋಮವಾರ ಸಂಜೆ ನಡೆಯಿತು. ದೊಡ್ಡಾಲತ್ತೂರು ಗ್ರಾಮದ ಶರತ್ (22), ಕೆಂಪನಟ್ಟಿ ಗ್ರಾಮದ ಮದನ್ ಕುಮಾರ್ ಮೃತರು. ಪುದುರಾಮಪುರ ಗ್ರಾಮದ ಕುಮಾರ್​ ಎಂಬವರು ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾರ್​ ಪಾರ್ಕಿಂಗ್​​ ವಿಚಾರಕ್ಕೆ ಗಲಾಟೆ: ನಾಲ್ವರ ಸಾವು

Last Updated : Jan 16, 2024, 8:45 AM IST

ABOUT THE AUTHOR

...view details