ಕರ್ನಾಟಕ

karnataka

ETV Bharat / state

ನಾಳೆ ಚಾಮರಾಜನಗರದಲ್ಲಿ ಸಿದ್ದು ಪ್ರತಿಭಟನೆ.. ಏ.26ರಂದು ಹನೂರಲ್ಲಿ ಹೆಚ್​ಡಿಕೆ ಜನತಾ ಜಲಧಾರೆ - ಹನೂರಲ್ಲಿ ಹೆಚ್​ಡಿಕೆ ಜನತಾ ಜಲಧಾರೆ

ಜನತಾ ಜಲಧಾರೆ ಮೂಲಕ ಗಮನ ಸೆಳೆಯುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಏ.26 ರಂದು ಹನೂರು ಪಟ್ಟಣದಲ್ಲಿ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

Siddaramaiah, H D Kumaraswamy
ಸಿದ್ದರಾಮಯ್ಯ, ಹೆಚ್​.ಡಿ ಕುಮಾರಸ್ವಾಮಿ

By

Published : Apr 18, 2022, 11:14 AM IST

ಚಾಮರಾಜನಗರ:ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಕೈ ಪಡೆ ಮುಂದುವರೆದ ಭಾಗವಾಗಿ ನಾಳೆ ನಗರದಲ್ಲಿ ಸಿದ್ದರಾಮಯ್ಯ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಈ ಸಂಬಂಧ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, 11 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹೆಚ್.ಸಿ. ಮಹಾದೇವಪ್ಪ, ಆರ್.ಧ್ರುವನಾರಾಯಣ ಸೇರಿದಂತೆ ಹಲವು ಮುಖಂಡರು ನಗರದ ವಿವಿಧೆಡೆ ಮೆರವಣಿಗೆ ನಡೆಸಲಿದ್ದಾರೆ.

ಪ್ರತಿಭಟನಾ ಮೆರವಣಿಗೆ ಬಳಿಕ ಮಾರಿಗುಡಿ ಸಮೀಪ ವೇದಿಕೆ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು. ಹಳೆ ಮೈಸೂರು ಭಾಗದಲ್ಲಿ ತನ್ನದೇ ವರ್ಚಸ್ಸು ಹೊಂದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ನಾಳೆ ಪ್ರತಿಭಟಿಸುವ ಮೂಲಕ ಕೈ ಪಡೆಗೆ ಶಕ್ತಿ ತುಂಬಲಿದ್ದಾರೆ.

ಹನೂರು ಪಟ್ಟಣದಲ್ಲಿ ಜೆಡಿಎಸ್​​ ಜನತಾ ಜಲಧಾರೆ

ಏ.26ಕ್ಕೆ ಹೆಚ್​​ಡಿಕೆ ಎಂಟ್ರಿ: ಮತ್ತೊಂದೆಡೆ ಜನತಾ ಜಲಧಾರೆ ಮೂಲಕ ಗಮನ ಸೆಳೆಯುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಏ.26 ರಂದು ಹನೂರು ಪಟ್ಟಣದಲ್ಲಿ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈಗಾಗಲೇ ಭಾನುವಾರದಿಂದ ಜನತಾ ಜಲಧಾರೆ ರಥ ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಸಂಚರಿಸುತ್ತಿದ್ದು, ಹಲವೆಡೆ ನೀರು ಸಂಗ್ರಹ ಮಾಡುತ್ತಿದೆ.

ಇದನ್ನೂ ಓದಿ:ಕಾಂಗ್ರೆಸ್​​-ಬಿಜೆಪಿಗೆ ಮತ ನೀಡಿದ್ರೆ ಇನ್ನೂ 70 ವರ್ಷವಾದ್ರೂ ನೀರು ಬರೋಲ್ಲ: ಹೆಚ್​ಡಿಕೆ

ABOUT THE AUTHOR

...view details