ಕರ್ನಾಟಕ

karnataka

ETV Bharat / state

ಸೋಮಣ್ಣಗೆ ಚಕ್ರವ್ಯೂಹ: ಚಾಮರಾಜನಗರದ ಬಂಡಾಯವೇ ಸಿದ್ದರಾಮಯ್ಯ ರಣನೀತಿಗೆ ಟಾನಿಕ್? - ಎರಡೂ ಕ್ಷೇತ್ರದಲ್ಲಿ ಸ್ಪರ್ಧೆ

ಎರಡೂ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಸೋಮಣ್ಣನವರು ನಿಂತಿದ್ದು, ವರುಣಾ ಕ್ಷೇತ್ರದಿಂದ ಇವರು ಸಂಧಿಗ್ಧತೆಗೆ ಒಳಗಾಗಲಿದ್ದಾರ ಎನ್ನಲಾಗುತ್ತಿದೆ.

somanna
ವಿ.ಸೋಮಣ್ಣ

By

Published : Apr 13, 2023, 11:36 AM IST

ಚಾಮರಾಜನಗರ: ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ‌ಮಾಡಿ ಪ್ರತಿಷ್ಠೆ ಪಣಕ್ಕಿಡಲು ತೆರಳುತ್ತಿರುವ ಸಚಿವ ವಿ. ಸೋಮಣ್ಣ ಅವರನ್ನು ಕಟ್ಟಿಹಾಕಲು ಕಾಂಗ್ರೆಸ್ ರಣತಂತ್ರ ಹೆಣೆಯುತ್ತಿದ್ದು ವರುಣಾಕ್ಕೇ ಹೆಚ್ಚು ತೆರಳದಂತೆ ಚಕ್ರವ್ಯೂಹ ಹೆಣೆಯುತ್ತಿದೆ. ಹೌದು.., ಸಿದ್ದರಾಮಯ್ಯ ವಿರುದ್ಧ ಪ್ರಬಲ ಸ್ಪರ್ಧೆವೊಡ್ಡಲು ಬಿಜೆಪಿ ಸೋಮಣ್ಣಗೆ ಟಿಕೆಟ್ ಕೊಟ್ಟಿದೆ. ಆದರೆ, ವರುಣಾಗೆ ಸೋಮಣ್ಣ ಹೋಗಲಾರದೇ ಚಾಮರಾಜನಗರದಲ್ಲೇ ಕಟ್ಟಿಹಾಕಲು ಕಾಂಗ್ರೆಸ್ ಮುಂದಾಗಿದ್ದು, ಇದಕ್ಕೆ ಬಿಜೆಪಿ ಬಂಡಾಯವೇ ಬಂಡವಾಳವಾಗಿದೆ.

ಸೋಮಣ್ಣಗೆ ಚಾಮರಾಜನಗರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಭಿನ್ನಮತ ಸ್ಪೋಟವಾಗಿದೆ. ಟಿಕೆಟ್ ವಂಚಿತ ನಾಗಶ್ರೀ ಪ್ರತಾಪ್ ಅವರ ಬೆಂಬಲಿಗರು ಈಗಾಗಲೇ ಕೆರಳಿ ಕೆಂಡವಾಗಿದ್ದು ಸಾಲುಸಾಲು ಸಭೆ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ಕೆಆರ್​ಐಡಿಎಲ್ ಅಧ್ಯಕ್ಷ ರುದ್ರೇಶ್ ಬಹಿರಂಗವಾಗಿಯೇ ಸೋಮಣ್ಣ ವಿರುದ್ಧ ಹರಿಹಾಯ್ದಿದ್ದು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಸೋಮಣ್ಣನವರಿಗೆ ವರುಣಾದತ್ತ ಗಮನ ಹರಿಸುವುದು ಅಸಾಧ್ಯ: ಹೇಳಿ-ಕೇಳಿ ಚಾಮರಾಜನಗರ ಹಾಗೂ ವರುಣಾದಲ್ಲಿ ಲಿಂಗಾಯತ ಪ್ರಾಬಲ್ಯ ಇದ್ದು, ಸೋಮಣ್ಣ ಅವರು ಲಿಂಗಾಯತ ನಾಯಕರನ್ನು ತುಳಿಯುತ್ತಿದ್ದಾರೆ, ಯಡಿಯೂರಪ್ಪ ಬಗ್ಗೆ ಇಲ್ಲ ಸಲ್ಲದ ಮಾತು ಆಡುತ್ತಾರೆ ಎಂಬ ರುದ್ರೇಶ್ ಆರೋಪ ಈಗಾಗಾಲೇ ಸಮುದಾಯದ ಜನರಲ್ಲಿ ಕಿಚ್ಚು ಹೊತ್ತಿಸಿದೆ. ಇದು ಚುನಾವಣೆ ಹೊತ್ತಲ್ಲಿ ಅಂಡರ್ ಕರೆಂಟಾಗಿ ಕೆಲಸ ಮಾಡಲಿದೆ ಎಂಬುದು ಸೋಮಣ್ಣನವರಿಗೆ ಮುಂಚಿತವಾಗಿ ತಿಳಿದಿದ್ದು, ಇದನ್ನು ಶಮನ ಮಾಡುವುದರಲ್ಲೇ ಸೋಮಣ್ಣ ಕಾಲ ಕಳೆಯಬೇಕಾಗುತ್ತದೆ. ವರುಣಾದತ್ತ ಗಮನ ಹರಿಸುವುದು ಅಸಾಧ್ಯವಾಗಲಿದೆ ಎಂಬುದು ಕೈ ಪಡೆ ರಣತಂತ್ರವಾಗಿದೆ.

ಇದನ್ನೂ ಓದಿ:ಹಾವೇರಿ, ಹಾನಗಲ್ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಪ್ರಕಟ.. ಕೈ ತಪ್ಪಿದ್ದಕ್ಕೆ ಸಿಎಂ ವಿರುದ್ಧ ಓಲೇಕಾರ್​ ಗಂಭೀರ ಆರೋಪ​

ಚಾಮರಾಜನಗರದ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲೂ ಅಸಮಾಧಾನ: ವರುಣಾದಲ್ಲಿ ಸೋಮಣ್ಣನ ಗಮನ ಕಡಿಮೆಯಾದಷ್ಟು ಕಾಂಗ್ರೆಸ್​ಗೆ ವರವಾಗಲಿದೆ ಎಂಬ ಒಂದು ಅಂಶದ ಮೇಲೆ ಚಾಮರಾಜನಗರದಲ್ಲಿನ ಬಂಡಾಯವನ್ನು ಹಾಗೇ ಉಳಿಸಲು ಕಾಂಗ್ರೆಸ್ ಈಗ ಮುಂದಾಗಿದೆ. ಚಾಮರಾಜನಗರದ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲೂ ಅಸಮಾಧಾನ ಇದ್ದು ಇವುಗಳನ್ನು ಪರಿಹರಿಸುವ ಜವಾಬ್ದಾರಿ ಸೋಮಣ್ಣನ ಮೇಲಿದೆ. ಬಂಡಾಯ ಶಮನ ಮಾಡುವುದೋ ವರುಣಾದಲ್ಲಿ ಯುದ್ಧ ಮಾಡುವುದೋ ಎಂಬ ಸಂಧಿಗ್ಧತೆಗೆ ಸೋಮಣ್ಣರನ್ನು ದೂಡುವುದೇ ಕಾಂಗ್ರೆಸ್​ನ ಸದ್ಯದ ರಣನೀತಿಯಾಗಿದೆ.

ಇಂದು ಚಾಮರಾಜನಗರಕ್ಕೆ ಸೋಮಣ್ಣ:ಟಿಕೆಟ್ ಘೋಷಣೆಯಾದ ಬಳಿಕ ಮೈಸೂರಿನ ವರುಣಕ್ಕೆ ಹಾಗೂ ಚಾಮರಾಜನಗರಕ್ಕೆ ಸೋಮಣ್ಣ ಬರುತ್ತಿದ್ದಾರೆ.‌ ಜೊತೆಗೆ, ಚಾಮರಾಜನಗರದ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ ಹೊಣೆಯನ್ನೂ ಹೊತ್ತಿದ್ದಾರೆ. ಕೊಳ್ಳೇಗಾಲದಲ್ಲಿ ಕಿನಕಹಳ್ಳಿ ರಾಚಯ್ಯ, ಗುಂಡ್ಲುಪೇಟೆಯಲ್ಲಿ ಎಂ. ಪಿ. ಸುನೀಲ್, ಹನೂರಲ್ಲಿ ಮೂವರು ಹಾಗೂ ಚಾಮರಾಜನಗರದಲ್ಲಿ ಪ್ರೊ. ಮಲ್ಲಿಕಾರ್ಜುನಪ್ಪ, ನಾಗಶ್ರೀ ಪ್ರತಾಪ್, ರುದ್ರೇಶ್ ಅಸಮಾಧಾನ ಸ್ಫೋಟಗೊಂಡಿದ್ದು‌ ಇದಕ್ಕೆಲ್ಲಾ ಸೋಮಣ್ಣ ಅವರೇ ತೇಪೆ ಹಚ್ಚಬೇಕಿದೆ. ಜೊತೆಗೆ, ಕಾಂಗ್ರೆಸ್​ನ ಮಾಸ್ ಲೀಡರ್ ಜೊತೆಯೂ ಸ್ಪರ್ಧೆ ಮಾಡಬೇಕಿದೆ.

ಇದನ್ನೂ ಓದಿ:ಎರಡನೇ ಪಟ್ಟಿ ಪ್ರಕಟ.. ಬಿಜೆಪಿ ಏಳು ಹಾಲಿ ಶಾಸಕರ ಬದಲಿಗೆ ಟಿಕೆಟ್​ ಪಡೆದ ಹೊಸ ಅಭ್ಯರ್ಥಿಗಳಿವರು

ABOUT THE AUTHOR

...view details