ಚಾಮರಾಜನಗರ: ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಜಿಲ್ಲೆ 9ನೇ ಸ್ಥಾನಕ್ಕೆ ಜಿಗಿದಿದೆ. ಜಿಲ್ಲೆಯ ಈ ಶೈಕ್ಷಣಿಕ ಸಾಧನೆಗೆ ಪ್ರಮುಖವಾಗಿ ನೆರವಾದುದು 'ಲ್ಯಾಂಪ್' ಎಂಬ ಕಾರ್ಯಕ್ರಮ.
ಹೌದು, Learning Achievement Motivation Programme ಎಂಬ ಕ್ರಿಯಾ ಯೋಜನೆಯ ಮೂಲಕ ಫಲಿತಾಂಶ ಸುಧಾರಿಸಲಾಗಿದೆ. ಈ ಕಾರ್ಯಕ್ರಮ ಮುಂದುವರೆಯಲಿದೆ ಎಂದು ಮಾಹಿತಿ ನೀಡುತ್ತಾರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುಳ.
ಇನ್ನೂ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಶಿಕ್ಷಣ ಸಚಿವರಾಗಿದ್ದ ವೇಳೆ ಪ್ರಾಯೋಗಿಕವಾಗಿ ಜಾರಿಗೆ ತಂದ ತೆರೆದ ಪುಸ್ತಕ ಪರೀಕ್ಷೆ ಪದ್ಧತಿಯಿಂದ ಮಕ್ಕಳು ಪುಸ್ತಕ ಓದಿನತ್ತಲೂ ಗಮನ ಹರಿಸಿದರು. ಮತ್ತೊಂದು ಪ್ರಮುಖ ಅಂಶವೆಂದರೆ ಶಿಕ್ಷಕರು ಮನೆ-ಮನೆಗೆ ಭೇಟಿ ನೀಡಿ ಪಾಲಕರೊಂದಿಗೆ ಚರ್ಚಿಸಿದರು. ಇದು ಶಾಲೆ ಬಿಟ್ಟ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮಾರ್ಗಕ್ಕೆ ಕರೆತರಲು ಸಹಕಾರಿಯಾಯಿತು ಎನ್ನುತ್ತಾರೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು.