ಕರ್ನಾಟಕ

karnataka

ಸೆಲ್ಫಿ ಹುಚ್ಚು: ಹೊಗೇನಕಲ್ ಜಲಪಾತದಲ್ಲಿ ಬಿದ್ದು ವಿದ್ಯಾರ್ಥಿ ಸಾವು

ಹೊಗೇನಕಲ್ ಜಲಪಾತಕ್ಕೆ ತೆರಳಿದ್ದ ವೇಳೆ ನೀರು ಧುಮ್ಮಿಕ್ಕುವ ಸ್ಥಳದ ತುದಿಯಲ್ಲಿ ನಿಂತುಕೊಂಡು ಸೆಲ್ಳಿ ತೆಗೆದುಕೊಳ್ಳುವಾಗ ಬಿದ್ದು ವಿದ್ಯಾರ್ಥಿಯೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ.

By

Published : Jan 27, 2022, 4:25 PM IST

Published : Jan 27, 2022, 4:25 PM IST

student
ಹೊಗೆನಕಲ್ ಜಲಪಾತದಲ್ಲಿ ಬಿದ್ದು ವಿದ್ಯಾರ್ಥಿ ಸಾವು

ಚಾಮರಾಜನಗರ:ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಹೊಗೇನಕಲ್ ಜಲಪಾತ ನೋಡಲು ಹೋಗಿದ್ದ ವಿದ್ಯಾರ್ಥಿಯೊಬ್ಬಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಕಾಲು ಜಾರಿಬಿದ್ದು ಮೃತಪಟ್ಟಿದ್ದಾನೆ.

ಮೈಸೂರು ಮೂಲದ ಉಮಾಶಂಕರ್ (19) ನರ್ಸಿಂಗ್ ವಿದ್ಯಾರ್ಥಿ ಮೃತ ದುರ್ದೈವಿ. ಇಂದು ಸ್ನೇಹಿತರೊಂದಿಗೆ ರಜೆಯ ಮಜಾ ಅನುಭವಿಸಲು ಹೊಗೇನಕಲ್ ಜಲಪಾತಕ್ಕೆ ತೆರಳಿದ್ದ ವೇಳೆ ನೀರು ಧುಮ್ಮಿಕ್ಕುವ ಸ್ಥಳದ ತುದಿಯಲ್ಲಿ ನಿಂತುಕೊಂಡು ಸೆಲ್ಳಿ ತೆಗೆದುಕೊಳ್ಳುವಾಗ ಘಟನೆ ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ

ಇದನ್ನೂ ಓದಿ: ಸಾವಿನಲ್ಲೂ ಒಂದಾದ ಗಂಡ ಹೆಂಡತಿ, ಪತ್ನಿ ಸಾವಿನಿಂದ ಮನನೊಂದು ನೇಣಿಗೆ ಶರಣಾದ ಪತಿ

ಸದ್ಯ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.

ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

ABOUT THE AUTHOR

...view details