ಕರ್ನಾಟಕ

karnataka

By

Published : Aug 17, 2020, 7:49 PM IST

ETV Bharat / state

ಟ್ರ್ಯಾಕ್ಟರ್ ಬೈಕ್ ಮುಖಾಮುಖಿ‌ ಡಿಕ್ಕಿ : ಬೈಕ್ ಸವಾರ ಸಾವು

ಕೊಳ್ಳೇಗಾಲದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.

Accident
Accident

ಕೊಳ್ಳೇಗಾಲ:ಟ್ರ್ಯಾಕ್ಟರ್ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ಮೈಸೂರು ತಿಲಕ್‌ನಗರ ನಿವಾಸಿ ಬೈಕ್‌ ಸವಾರ ಸುಮಂತ್(23) ಸಾವನ್ನಪ್ಪಿದ ಯುವಕ. ಮತ್ತೊಬ್ಬ ಸವಾರ ಕುವೆಂಪು ನಗರ ನಿವಾಸಿ ಅಜಿತ್(27) ಎಂಬುವವರು ಗಾಯಗೊಂಡಿದ್ದಾರೆ.

ಇವರು ಮಲೈಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸುವ ಸಲುವಾಗಿ ಮೈಸೂರಿನಿಂದ ತಮ್ಮ ಬೈಕ್ ನಲ್ಲಿ ಬರುತ್ತಿರುವಾಗ ತಾಲೂಕಿನ ಉತ್ತಂಬಳ್ಳಿ ಗ್ರಾಮದ ಬಳಿ
ಜೆಲ್ಲಿಕಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ನಡುವೆ‌ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರರು ತೀವ್ರ ಗಾಯಗೊಂಡಿದ್ದರು.

ತಕ್ಷಣ ಸ್ಥಳೀಯರು ಗಾಯಗೊಂಡು ಬೈಕ್ ಸವಾರರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಕೆ.ಆರ್.ಆಸ್ಪತ್ರೆಗೆ ರವಾನಿಸಿದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಸುಮಂತ್ ಕೆ.ಆರ್.ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಗೊಂಡ ಎರಡು ವಾಹನವನ್ನು ವಶಪಡಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

...view details