ಕರ್ನಾಟಕ

karnataka

By

Published : Apr 25, 2022, 10:46 PM IST

ETV Bharat / state

ಬೀದರ್ ಟೂ ಮಲೆಮಹದೇಶ್ವರ ಬೆಟ್ಟಕ್ಕೆ 23 ದಿನಗಳಲ್ಲಿ 900 ಕಿ. ಮೀ ಸೈಕಲ್ ತುಳಿದ ಅವಳಿ ಪೋರರು

75 ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಬೀದರ್‌ನಿಂದ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದವರೆಗೆ ಔರಾದ್ ತಾಲೂಕಿನ ಕೊಳ್ಳೂರು ಗ್ರಾಮದ ಅರುಣ್ ಹಾಗೂ ಕರಣ್ ಎಂಬ ಅವಳಿ ಸಹೋದರರು ಸೈಕಲ್ ಯಾತ್ರೆ ಕೈಗೊಂಡಿದ್ದಾರೆ.

ಸೈಕಲ್ ತುಳಿದ ಅವಳಿ ಪೋರರು
ಸೈಕಲ್ ತುಳಿದ ಅವಳಿ ಪೋರರು

ಚಾಮರಾಜನಗರ:ಬೀದರ್‌ನ ಔರಾದ್‌ನಿಂದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಅವಳಿ ಸಹೋದರರು ಸೈಕಲ್ ಯಾತ್ರೆ ಕೈಗೊಂಡಿದ್ದು, ಈಗಾಗಲೇ ಹನೂರು ತಾಲೂಕಿನ ಕೌದಳ್ಳಿ ತಲುಪಿದ್ದಾರೆ.

ಬೀದರ್ ಟೂ ಮಲೆಮಹದೇಶ್ವರ ಬೆಟ್ಟಕ್ಕೆ ಸೈಕಲ್ ತುಳಿದ ಅವಳಿ ಸಹೋದರರು

75 ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಬೀದರ್‌ನಿಂದ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದವರೆಗೆ ಔರಾದ್ ತಾಲೂಕಿನ ಕೊಳ್ಳೂರು ಗ್ರಾಮದ ಅರುಣ್ ಹಾಗೂ ಕರಣ್ ಎಂಬ ಅವಳಿ ಸಹೋದರರು ಸೈಕಲ್ ಯಾತ್ರೆ ಕೈಗೊಂಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡಿ ನಮನ ಸಲ್ಲಿಸುವ ಸದುದ್ದೇಶದಿಂದ ಈ ಸೈಕಲ್ ಯಾತ್ರೆ ಮಾಡುತ್ತಿದ್ದಾರೆ.

ಬೀದರ್‌ನಿಂದ ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ತುಮಕೂರು, ಬೆಂಗಳೂರು, ಮಂಡ್ಯ ಮೂಲಕ ಚಾಮರಾಜನಗರ ಮಲೆ ಮಹದೇಶ್ವರ ಬೆಟ್ಟವನ್ನು ಮಂಗಳವಾರ ತಲುಪಲಿದ್ದು, ಬಳಿಕ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಈ ಪುಟಾಣಿಗಳು ತಮ್ಮ ಸೈಕಲ್ ಯಾತ್ರೆಯನ್ನು ಮುಕ್ತಾಯಗೊಳಿಸಲಿದ್ದಾರೆ.

ಓದಿ:ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದು ದೌರ್ಜನ್ಯ: ಬಜ್ಪೆ ಠಾಣಾಧಿಕಾರಿ ಸಹಿತ ಮೂವರು ಸಿಬ್ಬಂದಿ ಅಮಾನತು

For All Latest Updates

TAGGED:

ABOUT THE AUTHOR

...view details