ಚಾಮರಾಜನಗರ: ನನಗೆ ಸಚಿವರು ಹೊಡೆದಿಲ್ಲ, ಭಾವುಕಳಾದಾಗ ನನ್ನನ್ನು ಸಮಾಧಾನಪಡಿಸಿದರು ಎಂದು ಕೆಂಪಮ್ಮ ಹೇಳಿದರು.
ಸಚಿವ ಸೋಮಣ್ಣ ಕಪಾಳಮೋಕ್ಷ ಪ್ರಕರಣಕ್ಕೆ ತಿರುವು: ತನಗೆ ಹೊಡೆದಿಲ್ಲ ಎಂದ ಮಹಿಳೆ - ಸಚಿವ ಸೋಮಣ್ಣ ಕಪಾಳಮೋಕ್ಷ ಪ್ರಕರಣಕ್ಕೆ ಟ್ವಿಸ್ಟ್
ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಪ್ರಕರಣ ತಿರುವು ಪಡೆದುಕೊಂಡಿದೆ. ಈ ಬಗ್ಗೆ ಮಹಿಳೆ ಕೆಂಪಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಕರಣಕ್ಕೆ ಸಮಜಾಯಿಷಿ ನೀಡುತ್ತಿರುವ ಮಹಿಳೆ
ಸಚಿವರ ಕಪಾಳಮೋಕ್ಷ ಪ್ರಕರಣ ಸಂಬಂಧಿಸಿದಂತೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದಾದ ನಂತರ ಬಿಜೆಪಿ ಯುವ ಮುಖಂಡ ಪ್ರಣಯ್ ಎಂಬವರ ಜೊತೆ ವಿಡಿಯೋಗೆ ಪ್ರತಿಕ್ರಿಯಿಸಿರುವ ಮಹಿಳೆ, ಪದೇ ಪದೆ ಸಚಿವರ ಕಾಲಿಗೆ ನಮಸ್ಕರಿಸುತ್ತಿದ್ದಾಗ ಬೇಡ ಎಂದು ತಿಳಿಸಿದರು. ಆ ಸಂದರ್ಭದಲ್ಲಿ ಸ್ವಲ್ಪ ಹೊತ್ತು ಭಾವುಕಳಾದೆ. ತಕ್ಷಣ ಸಚಿವರು ನನ್ನನ್ನು ಸಮಾಧಾನಪಡಿಸಿ, ನಿನಗೆ ವಸತಿ ಕಲ್ಪಿಸಿ ಕೊಡುವುದಾಗಿ ಹೇಳಿದರು. ಅವರು ನನಗೆ ಒಳ್ಳೆಯದು ಮಾಡಿದ್ದಾರೆಯೇ ಹೊರತು ಕೆಟ್ಟದು ಮಾಡಿಲ್ಲ ಎಂದು ಹೇಳಿಕೆ ಕೊಟ್ಟರು.
ಇದನ್ನೂ ಓದಿ:ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಸಚಿವ ವಿ. ಸೋಮಣ್ಣ
Last Updated : Oct 23, 2022, 12:29 PM IST