ಚಾಮರಾಜನಗರ:ಬೀದಿನಾಯಿಗಳ ದಾಳಿಗೆ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರಸಭೆಯ 12ನೇ ವಾರ್ಡ್ನ ಕೆಪಿ ಮೊಹಲ್ಲಾದಲ್ಲಿ ನಡೆದಿದೆ.
ಅರ್ಸಲನ್ (6) ಹಾಗೂ ಯಾಸೀನ್ (3) ನಾಯಿಗಳ ದಾಳಿಯಿಂದ ಗಾಯಗೊಂಡ ಮಕ್ಕಳು. ನಾಯಿಗಳ ದಾಳಿಯಿಂದಾಗಿ ಬಾಲಕ ಅರ್ಸಲನ್ ಮುಖದ ಮೇಲೆ ಆಳವಾದ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.