ಕರ್ನಾಟಕ

karnataka

ETV Bharat / state

ಚಾಮರಾಜನಗರದಲ್ಲಿ ಬೀದಿನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಾಯ

ಚಾಮರಾಜನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಇಂದು ಇಬ್ಬರು ಮಕ್ಕಳ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಡೆದಿದೆ. ಗಾಯಾಳು ಮಕ್ಕಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

By

Published : Apr 10, 2021, 1:40 PM IST

ಬೀದಿನಾಯಿಗಳ ದಾಳಿಯಿಂದ ಗಾಯಗೊಂಡ ಬಾಲಕರು
Two children injured by Street Dog attack in Chamarajanagar

ಚಾಮರಾಜನಗರ:ಬೀದಿನಾಯಿಗಳ ದಾಳಿಗೆ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರಸಭೆಯ 12ನೇ ವಾರ್ಡ್‌ನ ಕೆಪಿ ಮೊಹಲ್ಲಾದಲ್ಲಿ ನಡೆದಿದೆ.

ಚಾಮರಾಜನಗರದಲ್ಲಿ ಬೀದಿನಾಯಿಗಳ ದಾಳಿ

ಅರ್ಸಲನ್‌ (6) ಹಾಗೂ ಯಾಸೀನ್‌ (3) ನಾಯಿಗಳ ದಾಳಿಯಿಂದ ಗಾಯಗೊಂಡ‌ ಮಕ್ಕಳು. ನಾಯಿಗಳ ದಾಳಿಯಿಂದಾಗಿ ಬಾಲಕ ಅರ್ಸಲನ್‌ ಮುಖದ ಮೇಲೆ ಆಳವಾದ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಓದಿ: ಮುಷ್ಕರ ನಿರತ ನೌಕರರ ಮೇಲೆ ಸರ್ಕಾರ ಸಮರ: ಮತ್ತೆ 118 ಬಿಎಂಟಿಸಿ ನೌಕರರು ವಜಾ

ಘಟನೆ ಸಂಬಂಧ ಪೌರಾಯುಕ್ತರು ಹಾಗೂ ನಗರಸಭೆ ಗಮನಕ್ಕೆ ತಂದಿದ್ದೇನೆ. ಜಾನುವಾರು ಹಾಗೂ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ನಗರಸಭಾ ಸದಸ್ಯ ಅಬ್ರಾರ್ ಅಹಮದ್ ಒತ್ತಾಯಿಸಿದ್ದಾರೆ.

ABOUT THE AUTHOR

...view details