ಚಾಮರಾಜನಗರ ಗಡಿಯಲ್ಲಿ ತಮಿಳು ನಾಮಫಲಕ ತೆರವುಗೊಳಿಸಿದ ವಾಟಾಳ್ ನಾಗರಾಜ್!
ಚಾಮರಾಜನಗರ ತಾಲೂಕಿನ ಪುಣಜನೂರು ಹಾಗೂ ಕೋಳಿಪಾಳ್ಯ ನಡುವೆ ಹೆದ್ದಾರಿ ಪ್ರಾಧಿಕಾರ ಹಾಗೂ ತಮಿಳುನಾಡಿನ ಸರ್ಕಾರ ಅಳವಡಿಸಿದ್ದ ತಮಿಳು ನಾಮಫಲಕಗಳನ್ನು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹಾಗೂ ಬೆಂಬಲಿಗರು ತೆರವುಗೊಳಿಸಿದ್ದಾರೆ.
ತಮಿಳು ನಾಮಫಲಕಗಳನ್ನು ಕಿತ್ತೆಸೆದ ವಾಟಾಳ್ ನಾಗರಾಜ್
ಚಾಮರಾಜನಗರ:ಕರ್ನಾಟಕ ವ್ಯಾಪ್ತಿಯಲ್ಲಿ ಇದ್ದ ತಮಿಳು ನಾಮಫಲಕಗಳನ್ನು ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ತೆರವುಗೊಳಿಸಿ ಆಕ್ರೋಶ ಹೊರಹಾಕಿದರು.