ಚಾಮರಾಜನಗರ:ಮದುವೆಯಾಗಲು ಹೆಣ್ಣು ಕೊಡುವವರು ಸರ್ಕಾರಿ ನೌಕರಿಗೆ ಪಟ್ಟು ಹಿಡಿದಿದ್ದರಿಂದ ಬೇಸತ್ತು ಯುವಕನೋರ್ವ ಮನೆ ತೊರೆದಿರುವ ಘಟನೆ ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಭಿಷೇಕ್(29) ಎಂಬಾತನೆ ನಾಪತ್ತೆಯಾಗಿರುವ ಯುವಕನಾಗಿದ್ದಾನೆ.
ಮನೆಯವರು ಅಭಿಷೇಕ್ಗೆ ಮದುವೆ ಮಾಡಲು ಹೆಣ್ಣು ಹುಡುಕುತ್ತಿದ್ದು, ಎಲ್ಲೇ ಹೋದರೂ ಸರ್ಕಾರಿ ನೌಕರಿ ಇರುವವನೇ ಬೇಕೆಂದು ಹುಡುಗಿ ಮನೆಯವರು ಬೇಡಿಕೆ ಇಡುತ್ತಿದ್ದರಂತೆ. ಒಂದಲ್ಲ, ಎರಡಲ್ಲ ಹತ್ತಾರು ಹುಡುಗಿ ಮನೆಯವರು ಸರ್ಕಾರಿ ನೌಕರಿ ಇರುವ ಹುಡುಗನಿಗೇ ಪಟ್ಟು ಹಿಡಿದಿದ್ದರಿಂದ ಅಭಿಷೇಕ್ ಮನನೊಂದು ಮನೆ ತೊರೆದಿದ್ದಾನೆ ಎನ್ನಲಾಗುತ್ತಿದೆ.