ಕರ್ನಾಟಕ

karnataka

ಖಾತೆ ಮಾಡಿಕೊಡಲು ಲಂಚ: ಎಸಿಬಿ ಬಲೆಗೆ ಬಿದ್ದ ಪಂಚಾಯತಿ ಅಭಿವೃದ್ದಿ ಅಧಿಕಾರಿ

ಮಹಿಳೆಯೊಬ್ಬರಿಂದ ಲಂಚ ಪಡೆಯುವ ವೇಳೆ ಪಂಚಾಯತಿ ಅಭಿವೃದ್ದಿ ಅಧಿಕಾರಿ (ಪಿಡಿಒ) ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತುಮ್ಮನಹಳ್ಳಿ ಗ್ರಾಮಪಂಚಾಯತ್​ನಲ್ಲಿ ನಡೆದಿದೆ.

By

Published : Nov 20, 2019, 10:53 AM IST

Published : Nov 20, 2019, 10:53 AM IST

ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಪಿಡಿಓ

ಚಿಕ್ಕಬಳ್ಳಾಪುರ:ಖಾತೆ ಮಾಡಿಕೊಡಲು ಮಹಿಳೆಯೊಬ್ಬರಿಂದ ಲಂಚ ಪಡೆಯುವ ವೇಳೆ ಪಿಡಿಒ ಎಸಿಬಿ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತುಮ್ಮನಹಳ್ಳಿ ಗ್ರಾಮಪಂಚಾಯತ್​ನಲ್ಲಿ ನಡೆದಿದೆ.

ತುಮ್ಮನ ಹಳ್ಳಿ ಗ್ರಾಮಪಂಚಾಯತ್​ ಪಿಡಿಒ ರಾಮಕೃಷ್ಣಪ್ಪ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ರಾಮಕೃಷ್ಣಪ್ಪ ತಾಲೂಕಿನ ಸೊರಕಾಯನಹಳ್ಳಿ ನಿವಾಸಿ ಈರಮ್ಮ ಎಂಬುವರಿಗೆ ಖಾತೆ ಮಾಡಿಕೊಡಲು16 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆ ಬೀಸಿದೆ.

ಎಸಿಬಿ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ABOUT THE AUTHOR

...view details