ಬಾಗೇಪಲ್ಲಿ (ಚಿಕ್ಕಬಳ್ಳಾಪುರ):ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ನಡೆಸಿದ ದಾಳಿಗೆ ಲಂಚಕ್ಕಾಗಿ ಬೇಡಿಕೆ ಇಡುತ್ತಿದ್ದ ಬಾಗೇಪಲ್ಲಿ ತಾಲೂಕಿನ ತಿಮ್ಮಂಪಲ್ಲಿ ಗ್ರಾಮದ ಲೆಕ್ಕಾಧಿಕಾರಿ ಶಿವಕುಮಾರ್ ಸಿಕ್ಕಿ ಬಿದ್ದಿದ್ದಾರೆ.
ಜಮೀನು ಖಾತೆ ಮಾಡಲು ವ್ಯಕ್ತಿಯೊಬ್ಬರಿಂದ 35 ಸಾವಿರ ರೂ. ಹಣಕ್ಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಈ ಸಂಬಂಧ 10 ಸಾವಿರ ರೂ. ಮುಂಗಡ ಪಡೆದುಕೊಂಡಿದ್ದರು. ಪುನಃ ಇಂದು ಮಧ್ಯಾಹ್ನ 1.30 ಗಂಟೆಗೆ ಉಳಿದ 25 ಸಾವಿರ ರೂಗಳನ್ನು ಬಾಗೇಪಲ್ಲಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಪಡೆಯುತ್ತಿರುವಾಗ, ಖಚಿತ ಮಾಹಿತಿ ಆಧಾರಿಸಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.