ಕರ್ನಾಟಕ

karnataka

ETV Bharat / state

ಶುಭ ಕಾರ್ಯಕ್ಕೆ ಬಂದವರು ರಸ್ತೆ ಅಪಘಾತಕ್ಕೆ ಬಲಿಯಾದ್ರು - Bike Accident In Chikkaballapur

ಗುಡಿಬಂಡೆ ತಾಲೂಕಿನ ಮ್ಯಾಕಲಹಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ಶುಭ ಕಾರ್ಯವನ್ನು ಮುಗಿಸಿಕೊಂಡು ಹಿಂದಿರುಗುವ ವೇಳೆ ಆರ್ ಚೊಕ್ಕನಹಳ್ಳಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್​ ವಾಹನ ಹಾಗೂ ದ್ವಿಚಕ್ರವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್​ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

bike-accident-in-chikkaballapur

By

Published : Aug 4, 2019, 10:40 PM IST

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ಬಳಿಯ ಆರ್ ಚೊಕ್ಕನಹಳ್ಳಿ ಕ್ರಾಸ್ ಬಳಿ ಕ್ರೂಸರ್​​ ವಾಹನ ಹಾಗೂ ಬೈಕ್​ ನಡುವೆ ಬೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತರು ಗುಡಿಬಂಡೆ ತಾಲೂಕಿನ ಮ್ಯಾಕಲಹಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ಶುಭ ಕಾರ್ಯವನ್ನು ಮುಗಿಸಿಕೊಂಡು ಹಿಂದಿರುಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಪೆರೇಸಂದ್ರ-ಗುಡಿಬಂಡೆಯ ರಸ್ತೆ ತಿರುವಿನಲ್ಲಿ ಕ್ರೂಸರ್ ಕಾರು ಮತ್ತು ದ್ವಿ-ಚಕ್ರವಾಹನಗಳು ಅತಿ ವೇಗವಾಗಿ ಬಂದಿದ್ದು ಮುಖಾ-ಮುಖಿ ಡಿಕ್ಕಿಯಾದ ಪರಿಣಾಮ ಬೈಕ್​​ನಲ್ಲಿದ್ದರು ಇಬ್ಬರು ಸಾವನ್ನಪ್ಪಿದ್ದಾರೆ.

ಯಲಹಂಕದ ಪುರುಷೋತ್ತಮ (30) ಮತ್ತು ಆತನ ಸ್ನೇಹಿತ(ಹೆಸರು ತಿಳಿದುಬಂದಿಲ್ಲ) ಎಂದು ಗುಡಿಬಂಡೆ ಪೊಲೀಸರು ತಿಳಿಸಿದ್ದಾರೆ.

ABOUT THE AUTHOR

...view details