ಚಿಕ್ಕಬಳ್ಳಾಪುರ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಚೆಂಡೂರು ಕ್ರಾಸ್ ಬಳಿ ನಡೆದಿದೆ.
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು - ರಸ್ತೆ ಅಪಘಾತ ನ್ಯೂಸ್
ದ್ವಿಚಕ್ರ ವಾಹನದಲ್ಲಿ ರಾತ್ರಿ ವೇಳೆ ಊರಿಗೆ ಬರುತ್ತಿದ್ದ ಯುವಕನೋರ್ವ ಗುಡಿಬಂಡೆ ತಾಲೂಕಿನ ಚೆಂಡೂರು ಕ್ರಾಸ್ ಬಳಿ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಯುವಕ ಸಾವು
ದ್ವಿಚಕ್ರ ವಾಹನದಲ್ಲಿ ರಾತ್ರಿ ವೇಳೆ ಊರಿಗೆ ಬರುತ್ತಿದ್ದ ಬಾಗೇಪಲ್ಲಿ ತಾಲೂಕಿನಲ್ಲಿ ಗೂಳೂರು ಗ್ರಾಮದ ತಬ್ರೇಜ್ (27) ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ನಂತರ ಅಪರಿಚಿತ ವಾಹನದ ಚಾಲಕ ಪರಾರಿಯಾಗಿದ್ದಾನೆ.
ಈ ಕುರಿತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆ ರವಾನಿಸಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.