ಚಿಕ್ಕಬಳ್ಳಾಪುರ :ಶಿಡ್ಲಘಟ್ಟ ತಾಲೂಕಿನ ತಿಪ್ಪೇನಹಳ್ಳಿಯ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಸಾರಿಗೆಯೂ ಸೇರಿ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪಂಚಾಯತ್ ಸಿಇಒ ಫೌಜಿಯಾ ತರುನಮ್ ಭರವಸೆ ನೀಡಿದರು.
ಸರ್ಕಾರಿ ಐಟಿಐ ಕಾಲೇಜಿನಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿದ ಅವರು, ಈಗಾಗಲೇ ಕಾಲೇಜಿನಲ್ಲಿ ಕುಡಿಯುವ ನೀರು ಮತ್ತು ಬಸ್ನ ಸಮಸ್ಯೆ ಬಗೆಹರಿಸಲು ಮನವಿ ಮಾಡಿದ್ದಾರೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವುದರ ಜೊತೆಗೆ ಕಾಲೇಜಿನ ಪ್ರಾಂಗಣದಲ್ಲಿ ಸಸಿಗಳನ್ನು ನೆಟ್ಟು ಪೋಷಣೆ ಮಾಡಿ, ಆಟವಾಡಲು ಮೈದಾನವನ್ನು ಅಭಿವೃದ್ಧಿಗೊಳಿಸಲು ಅಗತ್ಯ ಸಹಾಯ ಮಾಡುವುದಾಗಿ ಆಶ್ವಾಸನೆ ನೀಡಿದರು.