ಚಿಕ್ಕಬಳ್ಳಾಪುರ:ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು ಅಂತಿಮವಾಗಿಯಾವ ಅಭ್ಯರ್ಥಿಯ ಮೊಬೈಲ್ ಸ್ವಿಚ್ ಆಫ್ ಆಗುತ್ತೆ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆ ಎಂದು ಭವಿಷ್ಯ ನುಡಿದರು.
ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಡಾ.ಕೆ. ಸುಧಾಕರ್, ಬಿಜೆಪಿಯನ್ನು ದೂರ ಇಡೋ ಮಾತನಾಡ್ತಾರೆ. ಅದೇ ಬಿಜೆಪಿ ಜೊತೆ ಸೇರಿ 20 ತಿಂಗಳ ಕಾಲ ಸಮ್ಮಿಶ್ರ ಸರ್ಕಾರ ರಚಿಸಿದ್ದರು. ಬಳಿಕ ಒಪ್ಪಂದದಂತೆ ಬಿಜೆಪಿಗೆ ಅಧಿಕಾರ ಬಿಟ್ಟು ಕೊಡದೆ ಮೋಸ ಮಾಡಿದ್ದರು. ಅವರಿಗೆ ತತ್ವ ಸಿದ್ಧಾಂತ, ನಿಷ್ಠೆ ಇಲ್ಲ. ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುತ್ತಾರೆ ಎಂದರು.