ಕರ್ನಾಟಕ

karnataka

ETV Bharat / state

ನಾನು 98 ರಲ್ಲಿ ಸತ್ಯಸಾಯಿ ಬಾಬಾ ದರ್ಶನ ಪಡೆದ ಮೇಲೆ ಮಾಂಸಹಾರ ತ್ಯಜಿಸಿದೆ : ಸಿಎಂ ಬೊಮ್ಮಾಯಿ - ಬಸವರಾಜ ಬೊಮ್ಮಾಯಿ ಹೇಳಿಕೆ

ಮಧುಸೂದನ ಸ್ವಾಮೀಜಿ ಅವರ ಇಚ್ಛೆಯಂತೆ ಸಂಸ್ಥೆಯ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಮೆಡಿಕಲ್ ಕಾಲೇಜು ಸ್ಥಾಪಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು ಎಂದ ಮುಖ್ಯಮಂತ್ರಿಗಳು ತಿಳಿಸಿದರು.

ಶ್ರೀ ಸತ್ಯಸಾಯಿ ಸರಳಾ ಸ್ಮಾರಕ ಆಸ್ಪತ್ರೆ ಮತ್ತು ಮಕ್ಕಳ ತೀವ್ರ ನಿಗಾ ಘಟಕವನ್ನು ಲೋಕಾರ್ಪಣೆ
ಶ್ರೀ ಸತ್ಯಸಾಯಿ ಸರಳಾ ಸ್ಮಾರಕ ಆಸ್ಪತ್ರೆ ಮತ್ತು ಮಕ್ಕಳ ತೀವ್ರ ನಿಗಾ ಘಟಕವನ್ನು ಲೋಕಾರ್ಪಣೆ

By

Published : Aug 27, 2021, 6:34 PM IST

Updated : Aug 27, 2021, 7:01 PM IST

ಚಿಕ್ಕಬಳ್ಳಾಪುರ: ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸ್ವಲ್ಪವಾದರೂ ಸಹಾಯ ಮಾಡುವ ಹೃದಯ ಇಟ್ಟುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್​​​ನಿಂದ ನಿರ್ಮಿಸಿರುವ 300 ಹಾಸಿಗೆಗಳ ಶ್ರೀ ಸತ್ಯಸಾಯಿ ಸರಳಾ ಸ್ಮಾರಕ ಆಸ್ಪತ್ರೆ ಮತ್ತು ಮಕ್ಕಳ ತೀವ್ರ ನಿಗಾ ಘಟಕವನ್ನು ಲೋಕಾರ್ಪಣೆ ಮಾಡಿ ನಂತರ ಮಾತನಾಡಿದ ಮುಖ್ಯಮಂತ್ರಿಗಳು, ಸತ್ಯಸಾಯಿ ಗ್ರಾಮದಲ್ಲಿ ಸೇವಾ ಭಾವ ಎದ್ದು ಕಾಣುತ್ತದೆ. ರಾಜ್ಯದ ಸೇವೆಯಲ್ಲಿ ಇಲ್ಲಿ ಕಲಿತದ್ದನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ನಿರ್ವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಶ್ರೀ ಸತ್ಯಸಾಯಿ ಸರಳಾ ಸ್ಮಾರಕ ಆಸ್ಪತ್ರೆ ಮತ್ತು ಮಕ್ಕಳ ತೀವ್ರ ನಿಗಾ ಘಟಕವನ್ನು ಲೋಕಾರ್ಪಣೆ

ಕಣ್ಣಿಗೆ ಕಾಣದ ಭಗವಂತನ ಕಾಣುವ ವಾತಾವರಣ ಇಲ್ಲಿದೆ

ಕಣ್ಣಿಗೆ ಕಾಣದ ಭಗವಂತನನ್ನು ಕಾಣುವ ಹಾಗೂ ಅನುಭವಿಸುವ ವಾತಾವರಣ ಸತ್ಯಸಾಯಿ ಗ್ರಾಮದಲ್ಲಿದೆ. ಕಲಿಯುಗದಲ್ಲಿ ಗುರುವಿನ ಮೂಲಕ ಪರಮಾತ್ಮನನ್ನು ಕಾಣಬಹುದು. ದೈವಿಕ ಪ್ರೇರಣೆಯಿಂದ ಅಮೆರಿಕ, ಆಫ್ರಿಕಾ, ಯೂರೋಪ್ ಹಲವಾರು ವಿದೇಶಗಳಿಂದ ಸತ್ಯಸಾಯಿ ಭಕ್ತರು ತಮ್ಮ ವೃತ್ತಿಯನ್ನು ಬಿಟ್ಟು ಇಲ್ಲಿ ಸೇವೆ ಮಾಡೋಕೆ ಬಂದಿದ್ದಾರೆ.

ಈ ಸೇವಾ ಮನೋಭಾವ ಶಕ್ತಿ ಸರ್ವವ್ಯಾಪಿಯಾಗಬೇಕು. ಅಧ್ಯಾತ್ಮಿಕವಾದ ಶಕ್ತಿ ಸದಾ ಸತ್ಯ , ಸರ್ವವ್ಯಾಪಿ, ಸರಳವಾಗಿರುತ್ತದೆ. ಸರಳತೆಯಲ್ಲಿ ದೈವತ್ವವನ್ನು ಕೂಡಿರುವುದೇ ಸೇವೆ ಎಂದರು.

ಮಧುಸೂದನ ಸ್ವಾಮೀಜಿಯವರ ಇಚ್ಛೆಯಂತೆ ಸಂಸ್ಥೆಯ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಮೆಡಿಕಲ್ ಕಾಲೇಜು ಸ್ಥಾಪಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು ಎಂದ ಮುಖ್ಯಮಂತ್ರಿಗಳು ,ಇಲ್ಲಿ ಆಸ್ಪತ್ರೆ ನಿರ್ಮಾಣವಾದರೆ ಬಡವರಿಗೆ, ಕಷ್ಟದಲ್ಲಿರುವವರಿಗೆ ಸಹಾಯವಾಗುವುದು. ಅಲ್ಲದೇ ಇಲ್ಲಿ ಕಲಿತ ವಿದ್ಯಾರ್ಥಿಗಳು ಮತ್ತು ಬೇರೆ ಸಂಸ್ಥೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ವ್ಯತ್ಯಾಸವಿದೆ. ಈ ವಿದ್ಯಾರ್ಥಿಗಳು ವೈದ್ಯ ವೃತ್ತಿಯನ್ನು ಸೇವೆಯೆಂದು ಸ್ವೀಕರಿಸುತ್ತಾರೆ ಎಂದರು.

ನಾನು 1998 ರಲ್ಲಿ ಸತ್ಯಸಾಯಿ ಬಾಬಾ ಅವರ ದರ್ಶನ ಪಡೆದಿದ್ದೆ. ಆ ಸಂದರ್ಭದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರದ ವೈಜ್ಞಾನಿಕ ಮತ್ತು ಆಧ್ಯಾತ್ಮಿಕ ತುಲನೆಯ ಕುರಿತ ಪುಸ್ತಕವನ್ನು ಒಬ್ಬರು ಓದುತ್ತಿದ್ದರು. ಅದನ್ನು ನೋಡಿ ಇದರಲ್ಲಿ ಸತ್ಯಸಾಯಿ ಅವರ ಸಂದೇಶವಿದೆ ಎಂದು ಅರಿತುಕೊಂಡು, ಅಂದೇ ಮಾಂಸಾಹಾರ ತ್ಯಜಿಸಿದೆನು.

ಇದನ್ನೂ ಓದಿ : ಮೈಸೂರಿನಲ್ಲಿ ರೇಪ್ ಆದರೆ ನನ್ನನ್ನು ಯಾಕೆ ಕೇಳ್ತಿರಪ್ಪೋ: ಜಿ.ಎಂ. ಸಿದ್ದೇಶ್ವರ್

ಸಾಯಿ ನೆನೆಸಿಕೊಂಡು ಪೂಜೆ ಮಾಡಿದಾಗ ತಾಯಿ ಆ ಕ್ಷಣ ಚೇತರಿಸಿಕೊಂಡಿದ್ದರು

ನನ್ನ ತಾಯಿ ಅತ್ಯಂತ ಕಷ್ಟದಲ್ಲಿದ್ದಾಗ ಅವರನ್ನು ನೆನೆಸಿಕೊಂಡು ಪೂಜೆ ಮಾಡಿದಾಗ ಹೋಟೆಲ್ ನಿಂದ ಆಸ್ಪತ್ರೆಗೆ ಹೋಗುವಷ್ಟರಲ್ಲಿ ತಾಯಿ ಎದ್ದು ಕುಳಿತಿದ್ದರು. ಹೀಗೆ ನಂಬಿಕೆ ಮತ್ತು ಭಕ್ತಿಯಲ್ಲಿ ದೈವತ್ವ ಇರುತ್ತದೆ. ಭಕ್ತಿ ಅಂದರೆ ಉತ್ಕೃಷ್ಟವಾದ ಪ್ರೀತಿ. ಗುರುವಿನಲ್ಲಿ ಕರಗಿ ನೀರಾಗಿ ಒಂದಾಗಬೇಕು. ನಂಬಿಕೆಯಲ್ಲಿ ಮತ್ತು ಭಕ್ತಿಯಲ್ಲಿ ದೈವತ್ವವಿದೆ. ಭಕ್ತಿ ಎಂದರೆ ಉತ್ಕೃಷ್ಟವಾದ ಕರಾರು ರಹಿತ, ಪ್ರೀತಿ ಎಂದರು.

ಇದನ್ನು ಅರ್ಥ ಮಾಡಿಕೊಂಡವರಿಗೆ ಗುರುವಿನ ಸಂಪೂರ್ಣ ಆಶೀರ್ವಾದ ಹಾಗೂ ದೈವತ್ವದ ರಕ್ಷಣೆ ದೊರೆಯುತ್ತದೆ. ಯಾವುದೇ ಕೆಲಸವಾಗಲೀ ದೈವತ್ವ ಹಾಗೂ ಗುರುವಿನ ಆಶೀರ್ವಾದ ಅಗತ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಶ್ರೀ ಸತ್ಯ ಸಾಯಿ ಸ್ಮಾರಕ ಆಸ್ಪತ್ರೆಯ ಶ್ರೀಸತ್ಯಸಾಯಿ ರಾಜೇಶ್ವರಿ ಸ್ಮಾರಕ ಕಟ್ಟಡಕ್ಕೆ ಇದೇ ಸಂದರ್ಭದಲ್ಲಿ ಭೂಮಿ ಪೂಜೆ ನೆರವೇರಿಸಿದರು.

ಸದ್ಗುರು ಶ್ರೀ ಮಧುಸೂದನ ಸಾಯಿ ಸ್ವಾಮೀಜಿ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಸಂಸದ ಬಚ್ಚೇಗೌಡ ಉಪಸ್ಥಿತರಿದ್ದರು.

Last Updated : Aug 27, 2021, 7:01 PM IST

ABOUT THE AUTHOR

...view details