ಬಾಗೇಪಲ್ಲಿ (ಚಿಕ್ಕಬಳ್ಳಾಪುರ): ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ, ಕೊರೊನಾ ತಡೆಯಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಯಿತು.
ನಿಮಗೆ ಸಹಾಯ ಮಾಡಲು ನಮಗೆ ಸಹಾಯ ಮಾಡಿ: ರೆಡ್ ಕ್ರಾಸ್ ಜನಜಾಗೃತಿ - Indian Red Cross
ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ರೆಡ್ ಕ್ರಾಸ್ ವತಿಯಿಂದ, ಕೊರೊನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು.
![ನಿಮಗೆ ಸಹಾಯ ಮಾಡಲು ನಮಗೆ ಸಹಾಯ ಮಾಡಿ: ರೆಡ್ ಕ್ರಾಸ್ ಜನಜಾಗೃತಿ ಕೊರೊನಾ ಬಗ್ಗೆ ಜನಜಾಗೃತಿ ಕಾರ್ಯಕ್ರಮ](https://etvbharatimages.akamaized.net/etvbharat/prod-images/768-512-6711472-996-6711472-1586346685535.jpg)
ಕೊರೊನಾ ಬಗ್ಗೆ ಜನಜಾಗೃತಿ ಕಾರ್ಯಕ್ರಮ
"ನಿಮಗೆ ಸಹಾಯ ಮಾಡಲು ನಮಗೆ ಸಹಾಯ ಮಾಡಿ" ಎಂಬ ಧ್ಯೇಯದೊಂದಿಗೆ ಹಾಗೂ ಇದರಿಂದ ನಿಮ್ಮನ್ನು ಮತ್ತು ಇತರರನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ, ಬಾಗೇಪಲ್ಲಿ ತಾಲೂಕು ತಹಶೀಲ್ದಾರ್ ಎಂ. ನಾಗರಾಜ್ ಅವರು, ಬಾಗೇಪಲ್ಲಿಯ 5 ಹೋಬಳಿಗಳ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಯ ಪ್ರತಿಯೊಂದು ಗ್ರಾಮದಲ್ಲಿಯೂ, ಕೊರೊನಾ ಬಗ್ಗೆ ಜಾಗೃತಿ ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ ಎಂದರು.