ಕರ್ನಾಟಕ

karnataka

By

Published : Jun 29, 2020, 10:30 PM IST

ETV Bharat / state

ಚಿಕ್ಕಬಳ್ಳಾಪುರದಲ್ಲಿ ಇಂದು 15 ಜನರಲ್ಲಿ ಕೊರೊನಾ ದೃಢ

ಗೌರಿಬಿದನೂರಿನಲ್ಲಿ ಮತ್ತೆ ಕೊರೊನಾ ಸ್ಪೋಟಗೊಂಡಿದ್ದು 10 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 2 ಪ್ರಕರಣಗಳು ಮಹಾರಾಷ್ಟ್ರದ ನಂಟನ್ನು ಹಾಗೂ ಓರ್ವ ಬೆಂಗಳೂರಿಗೆ ಪ್ರಯಾಣ ಬೆಳೆಸಿದವರಾಗಿದ್ದಾರೆ.

15 ಜನರಲ್ಲಿ ಕೊರೊನಾ ದೃಢ
15 ಜನರಲ್ಲಿ ಕೊರೊನಾ ದೃಢ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು 15 ಜನರಿಗೆ ಕೊರೊನಾ ವಕ್ಕರಿಸಿದ್ದು ಬಹುತೇಕ ಮಂದಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದವರಾಗಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರ ವರದಿ ಪಾಸಿಟಿವ್​ ಬಂದಿದೆ. ಗೌರಿಬಿದನೂರಿನಲ್ಲಿ ಮತ್ತೆ ಕೊರೊನಾ ಸ್ಪೋಟಗೊಂಡಿದ್ದು 10 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 2 ಪ್ರಕರಣಗಳು ಮಹಾರಾಷ್ಟ್ರದ ನಂಟನ್ನು ಹಾಗೂ ಓರ್ವ ಬೆಂಗಳೂರಿಗೆ ಪ್ರಯಾಣ ಬೆಳೆಸಿದವರಾಗಿದ್ದಾರೆ.

15 ಜನರಲ್ಲಿ ಕೊರೊನಾ ದೃಢ

ಚಿಂತಾಮಣಿಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಮೂವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದ ಹಿನ್ನೆಲೆ ಹೊಂದಿದ್ದಾರೆ. ಪಿ-8504 ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಒಟ್ಟಾರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 201 ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 37 ಸಕ್ರಿಯ ಪ್ರಕರಣಗಳಿವೆ.

ABOUT THE AUTHOR

...view details