ಕರ್ನಾಟಕ

karnataka

By

Published : Oct 17, 2019, 11:06 PM IST

ETV Bharat / state

6 ತಿಂಗಳಿಂದ ಕುಡಿಯಲು ಒಂದು ಹನಿ ನೀರೂ ಬಂದಿಲ್ಲ: ಪಂಚಾಯಿತಿ ಮುಂದೆ ಗ್ರಾಮಸ್ಥರ ಪ್ರತಿಭಟನೆ

6 ತಿಂಗಳಿಂದ ಒಂದು ಹನಿ ನೀರೂ ಬಂದಿಲ್ಲ. ಈ ಬಗ್ಗೆ ಜನಪ್ರತಿನಿಧಿನಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ನಿತ್ಯ ಹಣಕೊಟ್ಟು ಖಾಸಗಿ ಟ್ಯಾಂಕರ್ ನೀರು ಬಿಡಿಸಿಕೊಂಡು ಸಾವಿರಾರು ರೂಪಾಯಿಗಳನ್ನು ಅವರಿಗೆ ಕೊಡುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ ಐವಾರಪಲ್ಲಿ ಗ್ರಾಮಸ್ಥರು ಗೂಳೂರು ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.

ಪಂಚಾಯಿತಿ ಮುಂದೆ ಗ್ರಾಮಸ್ಥರ ಪ್ರತಿಭಟನೆ

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕಿನ ಐವಾರಪಲ್ಲಿ ಗ್ರಾಮಕ್ಕೆ ನೀರು ಬರುತ್ತಿಲ್ ಎಂದು ಗೂಳೂರು ಗ್ರಾಮ ಪಂಚಾಯತಿ ಮುಂದೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಪಂಚಾಯಿತಿ ಮುಂದೆ ಗ್ರಾಮಸ್ಥರ ಪ್ರತಿಭಟನೆ

ನಿತ್ಯ ಒಂದು ಮನೆಗೆ 25 ಬಿಂದಿಗೆಯಾದರೂ ನೀರು ಬೇಕು, 6 ತಿಂಗಳಿಂದ ಒಂದು ಹನಿ ನೀರು ಬಂದಿಲ್ಲ. ಈ ಬಗ್ಗೆ ಜನಪ್ರತಿನಿಧಿನಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ನಿತ್ಯ ಹಣಕೊಟ್ಟು ಖಾಸಗಿ ಟ್ಯಾಂಕರ್ ನೀರು ಬಿಡಿಸಿಕೊಂಡು ಸಾವಿರಾರು ರೂಪಾಯಿಗಳನ್ನು ಅವರಿಗೆ ಕೊಡುತ್ತಿದ್ದೇವೆ. ಎಂಟು ತಿಂಗಳ ಹಿಂದೆಯೇ ಬೋರ್​​​ವೆಲ್​ ಕೊರೆದಿದ್ದರೂ, ಅದಕ್ಕೆ ಪಂಪ್​ಸೆಟ್ ಹಾಕಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಿಡಿಒ ವೆಂಕಟರಮಣಪ್ಪ, ಒಂದು ದಿನ ಕಾಲಾವಕಾಶ ಕೊಡಿ ನಿಮ್ಮ ಸಮಸ್ಯೆ ಬಗೆಹರಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

For All Latest Updates

TAGGED:

ABOUT THE AUTHOR

...view details