ಬಾಗೇಪಲ್ಲಿ:ಈಟಿವಿ ಭಾರತ ಪ್ರಕಟಿಸಿದ ಸುದ್ದಿಯಿಂದ ಎಚ್ಚೆತ್ತ ಕಾರ್ಮಿಕ ಇಲಾಖೆ ಅಧಿಕಾರಿಗಳು ವಿವಿಧ ಕಲ್ಲು ಗಣಿಗಾರಿಕೆ ಕ್ವಾರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಕಳೆದ ಆ.30 ರಂದು "ಅಪಾಯಕಾರಿ ಕಲ್ಲು ಕ್ವಾರಿಗಳಲ್ಲಿ ದುಡಿಯುತ್ತಿದ್ದಾರೆ ಶಂಕಿತ ಬಾಲ ಕಾರ್ಮಿಕರು?.!" ಎಂಬ ಶೀರ್ಷಿಕೆಯಡಿಯಲ್ಲಿ ತಾಲೂಕಿನ ಗೂಳೂರು ಹೋಬಳಿ, ಕೊತ್ತಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಂಪಲ್ಲಿ ಹಾಗೂ ಮಾಡಪ್ಪಲ್ಲಿ ಸುತ್ತಮುತ್ತಲಿನ ಬೆಟ್ಟಗುಡ್ಡಗಳ ಪ್ರದೇಶಗಳಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯ ಕ್ವಾರಿಗಳಲ್ಲಿ ಶಂಕಿತ ಬಾಲ ಕಾರ್ಮಿಕರು ದುಡಿಯುತ್ತಿರುವ ಬಗ್ಗೆ ವಿಸ್ತೃತವಾದ ವರದಿ ಪ್ರಕಟವಾಗಿತ್ತು.