ಕರ್ನಾಟಕ

karnataka

By

Published : Apr 8, 2022, 12:35 PM IST

ETV Bharat / state

RSSನವ್ರು ದೇಶ ಸೇವೆಗೆ ತಮ್ಮ ಜೀವ ಮುಡುಪಾಗಿಟ್ಟವರೆ.. ಕೋವಿಡ್ ಸಮಯದಲ್ಲಿ ಅವಿಸ್ಮರಣೀಯ ಕೆಲಸ ಸಲ್ಲಿಸಿದ್ದಾರೆ.. ಸಚಿವ ಸುಧಾಕರ್

ಅಲ್ ಖೈದಾ ಸಂಘಟನೆಯನ್ನು ಬ್ಯಾನ್ ಮಾಡಲಾಗಿದೆ. ನಿಷೇಧ ಮಾಡಿದ ಸಂಘಟನೆಯ ಬಗ್ಗೆ ಮಾತನಾಡುವುದೇ ತಪ್ಪು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು..

Minister Dr. K Sudhakar
ಸಚಿವ ಡಾ. ಕೆ. ಸುಧಾಕರ್

ಚಿಕ್ಕಬಳ್ಳಾಪುರ :ಮುಸ್ಕಾನ್​ ಹೊಗಳಿ ಅಲ್​​ಖೈದಾ ಉಗ್ರನ ವಿಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಅಂತಹವರ ಹೇಳಿಕೆಗೆ ನಾವು ಖಂಡಿಸುತ್ತೇವೆ ಎಂದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ ಖೈದಾವನ್ನು ಬಹಿಷ್ಕಾರ ಮಾಡಲಾಗಿದೆ. ಅವರ ಹೇಳಿಕೆಯ ಬಗ್ಗೆ ಮಾತನಾಡುವುದೇ ಅಪರಾಧ. ದೇಶದ ಪ್ರತಿಯೊಬ್ಬ ಪ್ರಜೆಯೂ ಆ ಹೇಳಿಕೆಯನ್ನು ಖಂಡಿಸಬೇಕು. ಅಲ್ ಖೈದಾ ಸಂಘಟನೆಯನ್ನು ಬ್ಯಾನ್ ಮಾಡಲಾಗಿದೆ. ನಿಷೇಧ ಮಾಡಿದ ಸಂಘಟನೆಯ ಬಗ್ಗೆ ಮಾತನಾಡುವುದೇ ತಪ್ಪು ಎಂದರು.

ಅಲ್​​ಖೈದಾ ಉಗ್ರನ ವಿಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಡಾ. ಕೆ. ಸುಧಾಕರ್

ಸಿದ್ದರಾಮಯ್ಯನವರ ಹೇಳಿಕೆ ವಿಚಾರ ಮಾತನಾಡಿದ ಸಚಿವ ಸುಧಾಕರ್, ಇತ್ತೀಚೆಗೆ ಅವರಿಗೆ ಏನು ಆಗ್ತಾ ಇದೆ ಎಂದು ಗೊತ್ತಾಗುತ್ತಿಲ್ಲ. ಆರ್​​ಎಸ್​ಎಸ್​​ ಬಗ್ಗೆ ಅಪಹಾಸ್ಯ ಟೀಕೆ ಮಾಡಿದ್ರೆ ತಮ್ಮತನವನ್ನೆ ಕಳೆದುಕೊಳ್ಳುತ್ತಾರೆ. ಆರ್​​ಎಸ್​ಎಸ್‌ನವರು ದೇಶ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ.

ಕೋವಿಡ್ ಸಮಯದಲ್ಲಿ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದಾರೆ. ಅವರ ಬಗ್ಗೆ ಯಾರಿಗೆಲ್ಲಾ ಅನುಮಾನವಿದೆ, ಅವರೆಲ್ಲಾ ಒಂದು ದಿನ ಆರ್​​ಎಸ್​​ಎಸ್ ಜತೆ ಇದ್ದು ಸೇವೆ ಮಾಡಲಿ. ಆಗಲಾದರೂ ಜ್ಞಾನೋದಯವಾಗುತ್ತದೆ. ಆರ್​​ಎಸ್​ಎಸ್ ಬಗ್ಗೆ ಮಾತಾನಾಡುವವರಿಗೆ ಅದರ ಬಗ್ಗೆ ಏನು ಗೊತ್ತಿಲ್ಲ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ:ಬೇಡದ ವಿಚಾರಗಳಲ್ಲಿ ಮೂಗು ತೂರಿಸಲು ಸರ್ಕಾರಕ್ಕೆ ಪ್ರಚಾರದ ಹುಚ್ಚಿಲ್ಲ.. ಎಲ್ಲ ಆರೋಪಗಳಿಗೂ ಉತ್ತರ ಕೊಡಲು ಸಿದ್ಧ.. ಸಚಿವ ಕೋಟ

ABOUT THE AUTHOR

...view details