ಕರ್ನಾಟಕ

karnataka

By

Published : Sep 2, 2020, 4:27 PM IST

Updated : Sep 2, 2020, 4:34 PM IST

ETV Bharat / state

ಚಿಕ್ಕಬಳ್ಳಾಪುರ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಚಿವ ಸುಧಾಕರ್ ಸೂಚನೆ

ತಾಲೂಕು ಕೋವಿಡ್ ಕೇರ್ ಸೆಂಟರ್, ಆಸ್ಪತ್ರೆಗಳು ಮತ್ತು ತಾಲೂಕಿನ ಕೋವಿಡ್ ಸೋಂಕಿತರ ಬಗ್ಗೆ ಸಚಿವ ಸುಧಾಕರ್ ಮಾಹಿತಿ ಪಡೆದರು. ನರೇಗಾ ಯೋಜನೆಯಡಿ ಶಾಲೆಗಳ ಅಭಿವೃದ್ಧಿ ಕಾರ್ಯಕ್ಕೆ ಯೋಜನೆ ರೂಪಿಸಲು ಈ ವೇಳೆ ಸೂಚಿಸಿದರು.

Taluk progress review meeting chaired by Minister Sudhakar
ಸಚಿವ ಸುಧಾಕರ್ ನೇತೃತ್ವದಲ್ಲಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ

ಚಿಕ್ಕಬಳ್ಳಾಪುರ:ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಚಿಕ್ಕಬಳ್ಳಾಪುರ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನೀರಿನ ಸಮಸ್ಯೆ ಸೇರಿದಂತೆ ರೈತರ‌ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ತಾಲೂಕಿನ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಬಗ್ಗೆ ಹಾಗೂ ಕೊಳವೆ ಬಾವಿಗಳ ಬಗ್ಗೆ ಮಾಹಿತಿ ಪಡೆದು, ನೀರಿನ ಸಮಸ್ಯೆ ಇರುವ ಕಡೆ ಟ್ಯಾಂಕರ್ ಮುಖಾಂತರ ನೀರು ಪೂರೈಕೆಗೆ ಸೂಚಿಸಿದರು. ಫಸಲ್ ಬಿಮಾ ಯೋಜನೆಗೆ ಸಂಬಂಧಿಸಿದಂತೆ ಅರ್ಹ ರೈತರಿಗೆ ಆದಷ್ಟು ಬೇಗ ಪರಿಹಾರವನ್ನು ನೀಡುವುದರ ಜೊತೆಗೆ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ಮಾಡಬೇಕೆಂದು ತಿಳಿಸಿದರು.

ತಾಲೂಕು ಕೋವಿಡ್ ಕೇರ್ ಸೆಂಟರ್, ಆಸ್ಪತ್ರೆಗಳು ಮತ್ತು ತಾಲೂಕಿನ ಕೋವಿಡ್ ಸೋಂಕಿತರ ಬಗ್ಗೆಯೂ ಮಾಹಿತಿ ಪಡೆದರು. ನರೇಗಾ ಯೋಜನೆಯಡಿ ಶಾಲೆಗಳ ಅಭಿವೃದ್ಧಿ ಕಾರ್ಯಕ್ಕೆ ಯೋಜನೆ ರೂಪಿಸಲು ಈ ವೇಳೆ ಸೂಚಿಸಿದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್ ಲತಾ, ಸಿಇಓ ಪೌಝೀಯಾ ತರನುಮ್, ಎಸ್​​ಪಿ ಮಿಥುನ್ ಕುಮಾರ್ ಸೇರಿದಂತೆ ತಾಲೂಕಿನ ಅಧಿಕಾರಿಗಳು ಭಾಗಿಯಾಗಿದ್ದರು.

Last Updated : Sep 2, 2020, 4:34 PM IST

ABOUT THE AUTHOR

...view details