ಕರ್ನಾಟಕ

karnataka

By

Published : Jul 26, 2019, 1:36 PM IST

ETV Bharat / state

ಪುಂಡ-ಪೋಕರಿಗಳೇ ಹುಷಾರ್​... ಮಹಿಳೆಯರು, ವಿದ್ಯಾರ್ಥಿನಿಯರ ರಕ್ಷಣೆಗೆ ಬಂತು ಓಬವ್ವ ಪಡೆ

ಮಹಿಳೆಯರಿಗೆ ಹಾಗೂ ವಿದ್ಯಾರ್ಥಿನಿಯರನ್ನು ಪುಂಡಪೋಕರಿಗಳಿಂದ ರಕ್ಷಿಸಲು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಓಬವ್ವ ಪಡೆ ರಚಿಸಲಾಗಿದೆ.

ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರ ರಕ್ಷಣೆಗಾಗಿ ಓಬವ್ವ ಪಡೆಯನ್ನು ರಚಿಸಲಾಗಿದೆ.

ಚಿಕ್ಕಬಳ್ಳಾಪುರ: ಕಾಲೇಜು ವಿದ್ಯಾರ್ಥಿನಿಯರ ರಕ್ಷಣೆಗಾಗಿ ಇಲ್ಲಿನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹೊಸದೊಂದು ಪ್ಲಾನ್ ಮಾಡಿದ್ದಾರೆ. ಮಹಿಳೆಯರು ಮತ್ತು ವಿದ್ಯಾರ್ಥಿನಿಯರನ್ನು ಪುಂಡ -ಪೋಕರಿಗಳಿಂದ ರಕ್ಷಿಸಲು ಚಿಂತಾಮಣಿಯಲ್ಲಿ ಓಬವ್ವ ಪಡೆಯನ್ನು ರಚಿಸಲಾಗಿದೆ.

ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರ ರಕ್ಷಣೆಗಾಗಿ ಓಬವ್ವ ಪಡೆಯನ್ನು ರಚಿಸಲಾಗಿದೆ.

ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುತ್ತಿರುವುದು ಜಿಲ್ಲೆಯ ಹೆಗ್ಗಳಿಕೆ. ಇದರ ಸಲುವಾಗಿಯೇ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ರಕ್ಷಣೆಗಾಗಿ ಓಬವ್ವ ಪಡೆಯನ್ನು ರಚಿಸಿ ಅವರ ರಕ್ಷಣೆಗೆ ಪೊಲೀಸ್ ಇಲಾಖೆ ಮುಂದಾಗಿದೆ.

ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿರುವವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಇದು ಹೆಚ್ಚು ಉಪಯುಕ್ತವಾಗಲಿದೆ ಎಂದು ಡಿವೈಎಸ್ಪಿ ಶ್ರೀನಿವಾಸ್ ತಿಳಿಸಿದರು.

ಈ ಸಂದರ್ಭದಲ್ಲಿ ಡಿವೈಎಸ್​ಪಿ ಸೇರಿದಂತೆ ನಗರ ಠಾಣೆ ಇನ್​ಸ್ಪೆಕ್ಟರ್ ನಾರಾಯಣಸ್ವಾಮಿ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.

For All Latest Updates

TAGGED:

ABOUT THE AUTHOR

...view details