ಕರ್ನಾಟಕ

karnataka

ETV Bharat / state

ಹೆಲ್ಮೆಟ್​ ಇಲ್ಲದ ಪ್ರಯಾಣ... ಅವಾಜ್​ ಹಾಕಿದ ಬೈಕ್​ ಸವಾರರ ಮೇಲೆ ಪೊಲೀಸರಿಂದ ಹಲ್ಲೆ ಆರೋಪ - Chikkabalpure

ಚಿಂತಾಮಣಿ ಗ್ರಾಮಾಂತರ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವ ವೇಳೆ ಹೆಲ್ಮೆಟ್ ಇಲ್ಲದೆ ಬಂದ ಇಬ್ಬರನ್ನು ತಡೆದು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪೋಲೀಸರೇ ಹಲ್ಲೆ ಮಾಡಿ ಬೈಕ್ ಸವಾರರ ಮೇಲೆ ಪ್ರಕರಣ ದಾಖಲು

By

Published : Apr 15, 2019, 8:45 PM IST

ಚಿಕ್ಕಬಳ್ಳಾಪುರ : ಪೊಲೀಸರೇ ಹಲ್ಲೆ ಮಾಡಿ ಬೈಕ್ ಸವಾರರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಆರೋಪ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಹೆಲ್ಮೆಟ್​​ ಇಲ್ಲದ್ದಕ್ಕೆ ಬೈಕ್ ಸವಾರರ ವಿರುದ್ಧ ಪ್ರಕರಣ ದಾಖಲು

ಚಿಂತಾಮಣಿ ತಾಲೂಕು ತಿಮ್ಮಸಂದ್ರದ ಬಳಿ ಈ ಘಟನೆ ನಡೆದಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವ ವೇಳೆ ಹೆಲ್ಮೆಟ್ ಇಲ್ಲದೆ ಬಂದ ಇಬ್ಬರನ್ನು ತಡೆದಿದ್ದರು. ಈ ವೇಳೆ ಮಾತಿನ ಚಕಮಕಿ ನಡೆದು ಬೈಕ್​ ಸವಾರನೋರ್ವನ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಆಸ್ಪತ್ರೆಗೆ ಹೋಗುತ್ತಿರುವುದಾಗಿ ತಿಳಿಸಿ ಗೋಗೆರದರೂ ತಡೆದು ನಿಲ್ಲಿಸಿ ಬೈಕ್ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.

ಕರ್ತವ್ಯಕ್ಕೆ ಅಡ್ಡಿಪಡಿಸಿ ತಮೆಗೆ ಅವಾಜ್​ ಹಾಕಿದ್ದಾರೆಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಸಾದ್ ಎಂಬುವನನ್ನು ವಶಕ್ಕೆ ಪಡೆದಿದ್ದಾರೆ. ಬೈಕ್​ ಸವಾರ ಪೊಲೀಸ್​ಗೆ ಅವಾಜ್​ ಹಾಕಿದ್ದವನಿಗೆ ಒಂದು ಏಟು ನೀಡಿರುವ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್ ನಲ್ಲಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

For All Latest Updates

ABOUT THE AUTHOR

...view details