ಚಿಂತಾಮಣಿ : ಅಕ್ರಮವಾಗಿ ದಾಸ್ತಾನು ಮಾಡಲು ಬಂದಿದ್ದ ಅನ್ನಭಾಗ್ಯದ ಅಕ್ಕಿ ತುಂಬಿದ ಲಾರಿಯೊಂದನ್ನು ನಿವೃತ್ತ ಸೈನಿಕ ತಡೆದು ಅಧಿಕಾರಿಗಳಿಗೆ ಮಾಹಿತಿಕೊಟ್ಟ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.
ಚಿಂತಾಮಣಿ ನಗರದ ಎಪಿಎಂಸಿ ಮಾರುಕಟ್ಟೆ ಬಳಿಯ ರೈಸ್ ಮಿಲ್ ಬಳಿ ಲಾರಿ ನಿಲ್ಲಿಸಲಾಗಿತ್ತು. ಈ ವೇಳೆ ನಿವೃತ್ತ ಸೈನಿಕ ಶಿವಾನಂದರೆಡ್ಡಿ ಪರಿಶೀಲಿಸಿದಾಗ ಲಾರಿಯಲ್ಲಿ ಸುಮಾರು 50ಕ್ಕೂ ಅಧಿಕ ಅಕ್ಕಿ ಮೂಟೆಗಳನ್ನು ಅಕ್ರಮವಾಗಿ ದಾಸ್ತಾನು ಮಾಡುತ್ತಿರುವುದು ಬೆಳಕಿಗೆ ಬಂದಿದೆ.