ಚಿಕ್ಕಬಳ್ಳಾಪುರ:ತಾಲೂಕಿನ ಮಸ್ತೇನಹಳ್ಳಿ ಬಳಿ ಇರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಬೆಳಗ್ಗಿನ ತಿಂಡಿ ಸೇವಿಸಿ 41 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿರುವ ಘಟನೆ ನಡೆದಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸುಮಾರು 360 ವಿದ್ಯಾರ್ಥಿಗಳು ವಾಸವಾಗಿದ್ದರು. ಅಲ್ಲದೇ, ಬೆಳಗ್ಗಿನ ತಿಂಡಿ ಸೇವಿಸಿ ಸುಮಾರು ಮಕ್ಕಳಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥರನ್ನು ಕೈವಾರದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪರಿಣಾಮ, ಎಲ್ಲಾ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ. ಹೀಗಾಗಿ, ಪೋಷಕರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಮೊರಾರ್ಜಿ ದೇಸಾಯಿ ಶಾಲೆಯ ಮುಖ್ಯಸ್ಥರು ತಿಳಿಸಿದ್ದಾರೆ.