ಚಿಕ್ಕಬಳ್ಳಾಪುರ:ಬಾಗೇಪಲ್ಲಿ ತಾಲೂಕಿನಲ್ಲಿ ಕಾಯಿಲೆಗಳಿಂದ ಮೃತಪಟ್ಟ ರಾಸುಗಳ ಮಾಲೀಕರಿಗೆ ವಿಮೆ ಚೆಕ್ಗಳನ್ನು ಬಾಗೇಪಲ್ಲಿ ಪಟ್ಟಣದ ಹಾಲು ಉತ್ಪಾದಕರ ಸಂಘದ ವತಿಯಿಂದ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ವಿತರಿಸಿದರು.
ರಾಸುಗಳನ್ನು ಕಳೆದುಕೊಂಡ ಮಾಲೀಕರಿಗೆ ಪರಿಹಾರ ಚೆಕ್ ವಿತರಣೆ
ಬಾಗೆಪಲ್ಲಿ ತಾಲೂಕಿನಲ್ಲಿ ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ದ ರಾಸುಗಳ ಮಾಲೀಕರಿಗೆ ಶಾಸಕ ಸುಬ್ಬಾರೆಡ್ಡಿ ಪರಿಹಾರದ ಚೆಕ್ ವಿತರಿಸಿದರು.
ಮೆ ಚೆಕ್ ವಿತರಿಸಿದ ಸುಬ್ಬಾರೆಡ್ಡಿ
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರ ಜೀವನಕ್ಕೆ ಆಧಾರವಾಗಿರುವ ಪಶು ಸಂಗೋಪನೆ ಬಗ್ಗೆ ಹೆಚ್ಚಿನ ಅರಿವು ಪಡೆಯಬೇಕು. ರಾಸುಗಳಿಗೆ ಬರಬಹುದಾದ ಕಾಯಿಲೆಗಳ ಬಗ್ಗೆ ಅರಿವಿದ್ದರೆ ಮುಂಜಾಗೃತ ಕ್ರಮಗಳನ್ನು ತಿಳಿದುಕೊಳ್ಳಬಹುದು. ಹಾಲು ಒಕ್ಕೂಟದ ಶಿಬಿರದ ಅಧಿಕಾರಿಗಳು ಆ ನಿಟ್ಟಿನಲ್ಲಿ ಹಾಲು ಉತ್ಪಾದಕರಿಗೆ ಮಾರ್ಗದರ್ಶನ ನೀಡುವ ಕೆಲಸ ಮಾಡಬೇಕು ಎಂದರು.