ಚಿಕ್ಕಬಳ್ಳಾಪುರ:ಭಾರಿ ಮಳೆಯಿಂದ ಜಿಲ್ಲೆಯ ಸಾಕಷ್ಟು ಕೆರೆ,ಕುಂಟೆಗಳು ತುಂಬಿ ಹರಿಯುತ್ತಿವೆ. ಹೀಗಾಗಿ, ಕೆರೆ ಕೋಡಿ ಏರಿ ಮೇಲೆ ಜನ ಮತ್ತು ವಾಹನಗಳ ಸಂಚಾರಕ್ಕೆ ತಹಶೀಲ್ದಾರ್ ಸಿಗ್ಬತ್ತುಲ್ಲಾ ನಿರ್ಬಂಧ ಹೇರಿದ್ದು, ಸ್ವತಃ ಲಾಠಿ ಹಿಡಿದು ರಸ್ತೆಗಿಳಿದಿದ್ದಾರೆ.
ಗುಡಿಬಂಡೆಯ ಅಮಾನಿಭೈರ ಸಾಗರ ಕೆರೆ (Gudibande Amanibhaira lake) ಕಳೆದ ಎರಡು ತಿಂಗಳಿಂದ ಬೀಳುತ್ತಿರುವ ಮಳೆಯಿಂದಾಗಿ ಕೋಡಿ ಹರಿಯುತ್ತಿದೆ. ಕೆರೆ ಕೋಡಿಯೊಂದಿಗೆ ಕೆರೆ ಏರಿಯ ರಸ್ತೆಯ ಮೇಲೆ ನಾಲ್ಕು ಅಡಿ ಎತ್ತರದಲ್ಲಿ ನೀರು ಹರಿಯುತ್ತಿದ್ದು ಜನ ಮತ್ತು ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಗುಡಿಬಂಡೆ ತಹಶೀಲ್ದಾರ್ ಆದೇಶಿಸಿದ್ದಾರೆ.