ಚಿಕ್ಕಬಳ್ಳಾಪುರ: 'ಸರ್ಕಾರಿ ಶಿಕ್ಷಕನಾಗಿ ಅನುಮೋದನೆ ಮಾಡಿಕೊಳ್ಳದ ಖಾಸಗಿ ಆಡಳಿತ ಮಂಡಳಿ ನನ್ನ ಸಾವಿಗೆ ಕಾರಣ' ಎಂದು ಬ್ಲಾಕ್ ಬೋರ್ಡ್ ಮೇಲೆ ಬರೆದು ಶಿಕ್ಷಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯಲ್ಲಿ ನಡೆದಿದೆ.
ವಿವರ:
ತಾಲೂಕಿನ ಕನಗಾನಕೊಪ್ಪ ಗ್ರಾಮದ ನಿವಾಸಿ ಚಂದ್ರಶೇಖರ್ ಬಿನ್ ಕೃಷ್ಣಪ್ಪ (25) ಮೃತಪಟ್ಟ ಶಿಕ್ಷಕ ಎಂದು ತಿಳಿದು ಬಂದಿದೆ. ಮಂಚೇನಹಳ್ಳಿಯ ಆಚಾರ್ಯ ಸಂಯುಕ್ತ ಪ್ರೌಢಶಾಲೆಯಲ್ಲಿ ಕಳೆದೆರಡು ವರ್ಷಗಳಿಂದ ಶೈಕ್ಷಣಿಕ ವರ್ಷಕ್ಕೆ ಸೀಮಿತವಾದಂತೆ ಗೆಸ್ಟ್ ಟೀಚರ್ ಆಗಿ ಇವರು ಕೆಲಸ ನಿರ್ವಹಿಸುತ್ತಿದ್ದರು. ಆದರೆ ಈ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳು ಪ್ರಾರಂಭವಾಗದೇ ಇರುವುದರಿಂದ ಇವರನ್ನು ಗೆಸ್ಟ್ ಟೀಚರ್ ಆಗಿ ತೆಗೆದುಕೊಂಡಿಲ್ಲ. ಹೀಗಾಗಿ ಇವರು ತಮ್ಮ ಜೀವನೋಪಾಯಕ್ಕಾಗಿ ಮಂಚೇನಹಳ್ಳಿಯ ಅನಿಲ್ ಕುಮಾರ್ ಎಂಬುವರ ಮನೆಯನ್ನು ಬಾಡಿಗೆ ತೆಗೆದುಕೊಂಡು ಟ್ಯೂಷನ್ ನಡೆಸುತ್ತಿದ್ದರು.