ಕರ್ನಾಟಕ

karnataka

ETV Bharat / state

ಚಲಿಸುತ್ತಿದ್ದ ಬಸ್​​​ನಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು - undefined

ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿವೋರ್ವ ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ಸಾವನ್ನಪ್ಪಿದ್ದಾನೆ. ಚಿಂತಾಮಣಿ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಪಿಯುಸಿ ವಿದ್ಯಾರ್ಥಿ ಸಾವು

By

Published : May 9, 2019, 1:20 PM IST

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವಿದ್ಯಾರ್ಥಿವೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.

ನಾರಾಯಣ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ, ನಲ್ಲಗುಟ್ಲಹಳ್ಳಿ ಗ್ರಾಮದ ಪ್ರದೀಪ್ (18) ಬಸ್​ನಿಂದ ಬಿದ್ದು ಸಾವನ್ನಪ್ಪಿರುವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ‌.

ಬಸ್​ನಿಂದ ಬಿದ್ದು ವಿದ್ಯಾರ್ಥಿ ಸಾವು

ಚಿಂತಾಮಣಿ ನಗರದ ವಿನೋಭ ಕಾಲೋನಿಯ ಪಕ್ಕದಲ್ಲಿ ಅಪಘಾತ ನಡೆದಿದ್ದು, ಬಸ್ಸಿನ ಅತಿ ವೇಗವೇ ಅಪಘಾತಕ್ಕೆ ಕಾರಣವೆಂದು ಆರೋಪಿಸಲಾಗಿದೆ. ಈ ಸಂಬಂಧ ಚಿಂತಾಮಣಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details