ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ: ಎಣ್ಣೆ ಏಟಲ್ಲಿ ಮನೆ ಕಾಂಪೌಂಡ್​ಗೆ ಗುದ್ದಿದ ಕಾರು... ವ್ಯಕ್ತಿ ಸಾವು! - The first person died by liquor

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಇಡಗೂರು ಗ್ರಾಮದ ನಿವಾಸಿ ವಿನೋದ್​ ಗೌಡ ಎಂಬುವರು ಅತೀ ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಮನೆಗೆ ಬರುತ್ತಿರುವಾಗ ಕಾಂಪೌಂಡ್​​ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮದ್ಯಪಾನಕ್ಕೆ ಮೊದಲ ಬಲಿ
ಮದ್ಯಪಾನಕ್ಕೆ ಮೊದಲ ಬಲಿ

By

Published : May 4, 2020, 10:17 PM IST

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಇಡಗೂರು ಗ್ರಾಮದ ನಿವಾಸಿಯೊಬ್ಬರು ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿದ್ದಾರೆ. ಪರಿಣಾಮ ಅವರ ಮನೆಯ ಕಾಂಪೌಂಡ್​​ ಗೋಡೆಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಳೆದ ಒಂದೂವರೆ ತಿಂಗಳಿನಿಂದ ಲಾಕ್​​ಡೌನ್​​​ ಇದ್ದ ಕಾರಣ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಆದರೆ ಸರ್ಕಾರ ತನ್ನ ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳಲು ಇಂದಿನಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ.

ಇಡಗೂರು ಗ್ರಾಮದ ನಿವಾಸಿ ವಿನೋದ್ ಗೌಡ

ಗೌರಿಬಿದನೂರು ತಾಲೂಕು ಇಡಗೂರು ಗ್ರಾಮದ ನಿವಾಸಿ ವಿನೋದ್ ಗೌಡ (34) ಎಂಬ ವ್ಯಕ್ತಿ ಕಂಠಪೂರ್ತಿ ಕುಡಿದು ತನ್ನ ಕಾರಿನಲ್ಲಿ ಸುತ್ತಾಡಿದ್ದಾನಂತೆ. ಸಂಜೆ ವೇಗವಾಗಿ ಕಾರು ಓಡಿಸಿಕೊಂಡು ಮನೆಗೆ ಬರುವಾಗ ಕಾಂಪೌಂಡ್​ ಗೋಡೆಗೆ ಡಿಕ್ಕಿ ಹೊಡೆಸಿದ್ದಾನೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ವಿನೋದ್​​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details