ಚಿಕ್ಕಬಳ್ಳಾಪುರ: ದನಗಳ ಖರೀದಿಗೆ ಕಾರಿನಲ್ಲಿ ತೆರಳುತ್ತಿದ್ದ ಬೆಂಗಳೂರು ವ್ಯಾಪಾರಿಗಳನ್ನು ಅಡ್ಡಗಟ್ಟಿ ಲಕ್ಷಾಂತರ ರೂಪಾಯಿ ಮೌಲ್ಯದ ಹಣ ದೋಚಿ ಪರಾರಿಯಾಗಿದ್ದ 8 ಮಂದಿ ಆರೋಪಿಗಳನ್ನು ಇಲ್ಲಿನ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7ರ ಹಾರೋಬಂಡೆ ಸಮೀಪ ಕಳೆದ ತಿಂಗಳ 26ರಂದು ಬೆಂಗಳೂರಿನ ಶಿವಜಿನಗರದ ದನಗಳ ವ್ಯಾಪಾರಿಗಳು ತೆರಳುತ್ತಿದ್ದ ವೇಳೆ ಆರೋಪಿಗಳು ಕಾರನ್ನು ಮಧ್ಯರಾತ್ರಿ ಅಡ್ಡಗಟ್ಟಿ ಚಾಕು ತೋರಿಸಿ 3 ಲಕ್ಷ ರೂ. ದೋಚಿ ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.