ಕರ್ನಾಟಕ

karnataka

ETV Bharat / state

ಕೋಲಾರ ಲೋಕಸಭಾ ಕ್ಷೇತ್ರದಲ್ಲೂ ಜೋಡೆತ್ತುಗಳ ಹವಾ: ಆರ್.ಅಶೋಕ್ - ಚಿಕ್ಕಬಳ್ಳಾಪುರ

ಕೋಲಾರ ಲೋಕಸಭಾ ಚುನಾವಣೆಯು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸದ್ಯ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ಪಡೆದ ಚಿಂತಾಮಣಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರೋಡ್ ಶೋ ನಡೆಸಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದರು.

ಆರ್ ಅಶೋಕ್

By

Published : Apr 16, 2019, 4:59 AM IST

ಚಿಕ್ಕಬಳ್ಳಾಪುರ: ರಾಜ್ಯ ಲೋಕಸಭಾ ಚುನಾವಣೆಯಲ್ಲಿ ಜೋಡೆತ್ತುಗಳ ಸದ್ದು ಹೆಚ್ಚಾಗುತ್ತಿದೆ. ಕೋಲಾರ ಲೋಕಸಭಾ ಚುನಾವಣೆಯಲ್ಲಿ ಕಮಲದ ಪರ ಜೋಡೆತ್ತುಗಳು ಸಾಕಷ್ಟು ಶ್ರಮವಹಿಸುತ್ತಿವೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಚಿಂತಾಮಣಿ ನಗರದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ತಿಳಿಸಿದ್ದಾರೆ.

ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮುನಿಯಪ್ಪ ಸಾಧನೆ ಶೂನ್ಯವಾಗಿದ್ದು, ತನ್ನ ಬೆಂಬಲಿಗರಿಗೆ ಹಾಗೂ ಮಗಳಿಗೆ ಮಾತ್ರ ಅನುಕೂಲ ಮಾಡಿಕೊಟ್ಟಿದ್ದಾರೆ. ಸದ್ಯ ಈ ಬಾರಿ ಮುನಿಯಪ್ಪರನ್ನು ಮನೆಗೆ ಕಳುಹಿಸಲು ಸ್ಥಳೀಯ ಮಾಜಿ ಶಾಸಕ ಸುಧಾಕರ್ ಹಾಗೂ ಕೊತ್ತೂರು ಮಂಜುನಾಥ್ ಇಬ್ಬರು ಜೋಡೆತ್ತುಗಳು ಸಾಕಷ್ಟು ಶ್ರಮವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ಆರ್ ಅಶೋಕ್

ಈ ಬಾರಿ ಮೋದಿಯ ಅಲೆಯಲ್ಲಿ ಕೆ.ಹೆಚ್ ಮುನಿಯಪ್ಪ ಮನೆಗೆ ಹೋಗುವುದು ಗ್ಯಾರೆಂಟಿ. ಕೋಲಾರ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ 7 ಬಾರಿ ಗೆದ್ದರೂ, ಕೋಲಾರ ಮಾತ್ರ ಬರಡು ಭೂಮಿಯಾಗಿದೆಯೇ ಹೊರತು ಯಾವೊಂದು ಅಭಿವೃದ್ಧಿಯೂ ಆಗಿಲ್ಲ ಎಂದು ಕಿಡಿಕಾರಿದರು.

ಕಳೆದ ಬಾರಿ ಮುನಿಯಪ್ಪ ಹಾಗೂ ದೇವೆಗೌಡರು ಒಳಒಪ್ಪಂದ ಮಾಡಿಕೊಂಡು ಅಧಿಕಾರ ಚಲಾಯಿಸುತ್ತಿದ್ದರು. ಆದರೆ ಈಗ ನೇರ ಹಣಾಹಣಿ ಇದ್ದು ಬಿಜೆಪಿ ನೂರಕ್ಕೆ ನೂರರಷ್ಟು ಗೆಲ್ಲುತ್ತದೆ ಎಂದು ತಿಳಿಸಿದರು.

ABOUT THE AUTHOR

...view details