ಚಿಕ್ಕಬಳ್ಳಾಪುರ: ಬರಪೀಡಿತ ಜಿಲ್ಲೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೂ ಮುನ್ನ ನಡೆದಿದ್ದ ರಾಜಕೀಯ ಅಭಿಪ್ರಾಯಗಳು ಕೊನೆಗೂ ನಿಜವಾಗಿವೆ. ಅಂದುಕೊಂಡಂತೆ ಮೈತ್ರಿ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿಗೆ ಬಿಗ್ ಶಾಕ್ ಸಿಕ್ಕಿದೆ. ಈ ಮೂಲಕ ಕಳೆದ ಬಾರಿಯೂ ಸೋಲುಂಡ ಬಿಜೆಪಿಯ ಬಿ.ಎನ್.ಬಚ್ಚೇಗೌಡರ ಮೊಗದಲ್ಲಿ ಈ ಬಾರಿ ಗೆಲುವಿನ ಮಂದಹಾಸ ಮೂಡಿದೆೆ. ಅವರ ಎಲ್ಲಾ ರಾಜಕೀಯ ತಂತ್ರಗಾರಿಕೆಗಳು ಫಲ ನೀಡಿವೆ.
ಪ್ರಧಾನಿ ನರೇಂದ್ರ ಮೋದಿ ಅವರ ಹವಾ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಗೆಲುವು ತಂದುಕೊಟ್ಟಿತ್ತು. ಆದ್ರೆ, ನಮೋ ಅಲೆ ಕರ್ನಾಟಕದ ಅರ್ಧದಷ್ಟು ಕಡೆ ಕೈಕೊಟ್ಟಿರುವುದು ಅಷ್ಟೇ ಸತ್ಯ. ಮೋದಿ ಅವರ ವರ್ಚಸ್ಸಿನ ಹೊರತಾಗಿಯೂ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಎಂ.ವೀರಪ್ಪ ಮೊಯ್ಲಿ ಜಯಭೇರಿ ಬಾರಿಸಿದ್ದರು.ಆದ್ರೆ ಈ ಬಾರಿ ಮೊಯ್ಲಿ ಅವರಿಗೆ ಬಚ್ಚೇಗೌಡ್ರು ಸೋಲಿನ ರುಚಿ ತೋರಿಸಿದ್ದಾರೆ.