ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊರೊನಾ ವಾರಿಯರ್ಸ್​​​ ಮೇಲೆ ಹಲ್ಲೆ - ಹಲ್ಲೆ

ಕೊರೊನಾ ಕುರಿತು ಜಾಗೃತಿ ಹಾಡು ಹಾಕಿಕೊಂಡು ಕಸ ಸಂಗ್ರಹಿಸುತ್ತಿದ್ದ ಪೌರಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ. ತೀವ್ರ ಹಲ್ಲೆಗೊಳಗಾದ ಪೌರಕಾರ್ಮಿಕ ಮಂಜುನಾಥ್ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಮಹಿಳಾ ಕಾರ್ಮಿಕರಾಗಿರುವ ಗೀತಾ ಎಂಬಾಕೆಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಹಲ್ಲೆ
ಹಲ್ಲೆ

By

Published : Apr 21, 2020, 2:47 PM IST

ಚಿಕ್ಕಮಗಳೂರು:ಕ್ಷುಲ್ಲಕ ಕಾರಣಕ್ಕೆ ಏಕಾಏಕಿ ಕೆಲ ಕಿಡಿಗೇಡಿಗಳು ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದ ಉಪ್ಪಳ್ಳಿ ಮಸೀದಿ ಬಳಿ ನಡೆದಿದೆ.

ಕೊರೊನಾ ಕುರಿತು ಜಾಗೃತಿ ಹಾಡು ಹಾಕಿಕೊಂಡು ಕಸ ಸಂಗ್ರಹಿಸುತ್ತಿದ್ದ ಪೌರಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ. ತೀವ್ರ ಹಲ್ಲೆಗೊಳಗಾದ ಪೌರಕಾರ್ಮಿಕ ಮಂಜುನಾಥ್ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಮಹಿಳಾ ಕಾರ್ಮಿಕರಾಗಿರುವ ಗೀತಾ ಎಂಬಾಕೆಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮತ್ತೋರ್ವ ಪೌರಕಾರ್ಮಿಕ ಯೇಸು ಮೇಲೂ ಹಲ್ಲೆ ನಡೆಸಿ, ಶರ್ಟ್ ಹರಿದು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಕೊರೊನಾ ವಾರಿಯರ್ಸ್​​​ ಮೇಲೆ ಹಲ್ಲೆ

ನಗರದ ಬಸವನಹಳ್ಳಿ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಹಲ್ಲೆ ನಡೆಸಿದ ಆರೋಪಿಗಳ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

ABOUT THE AUTHOR

...view details