ಕರ್ನಾಟಕ

karnataka

ETV Bharat / state

ಯು.ಟಿ.ಖಾದರ್​​ ಬಂಧಿಸುವಂತೆ ಬಿಜೆಪಿ ಮುಖಂಡರಿಂದ ಎಸ್ಪಿಗೆ ಮನವಿ - ಮಂಗಳೂರಿನಲ್ಲಿ ಇಬ್ಬರ ಸಾವಿಗೆ ಕಾರಣ

ಮಂಗಳೂರಿನ ಪ್ರತಿಭಟನೆಯಲ್ಲಿ ಘರ್ಷಣೆಯುಂಟಾಗಿ ಇಬ್ಬರು ಮೃತಪಡಲು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್​ ಕಾರಣ. ಆದ್ದರಿಂದ ಅವರ​ ಮೇಲೆ ಈ ಕೂಡಲೇ ಕ್ರಿಮಿನಲ್​ ಪ್ರಕರಣ ಹೂಡಿ ಬಂಧಿಸಬೇಕು ಎಂದು ಚಿಕ್ಕಮಗಳೂರು ಬಿಜೆಪಿ ಮುಖಂಡರು ಎಸ್​ಪಿಗೆ ಮನವಿ ಸಲ್ಲಿಸಿದ್ದಾರೆ.

appealing for the arrest of U.T.Khadar
ಯು.ಟಿ.ಖಾದರ್​​ನನ್ನು ಬಂಧಿಸುವಂತೆ ಮನವಿ

By

Published : Dec 20, 2019, 5:36 PM IST

ಚಿಕ್ಕಮಗಳೂರು: ಕಾಂಗ್ರೆಸ್ಶಾಸಕ ಯು.ಟಿ.ಖಾದರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಮುಖಂಡರು ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಹರೀಶ್ ಪಾಂಡೆ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಶಾಸಕ ಯು.ಟಿ.ಖಾದರ್, ಪೌರತ್ವ ಕಾಯ್ದೆ ರಾಜ್ಯದಲ್ಲಿ ಜಾರಿಯಾದರೆ ಇಡೀ ರಾಜ್ಯವೆ ಹೊತ್ತಿ ಉರಿಯಲಿದೆ ಎಂದು ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಈ ಮೂಲಕ ಮಂಗಳೂರಿನಲ್ಲಿ ಇಬ್ಬರ ಸಾವಿಗೆ ಕಾರಣರಾಗಿದ್ದಾರೆ. ಖಾದರ್ ಅವರು ಉದ್ದೇಶ ಪೂರ್ವಕವಾಗಿ ಈ ಹೇಳಿಕೆ ನೀಡಿದ್ದು, ಅವರ ವಿರುದ್ದ ಐಪಿಸಿ ಸೆಕ್ಷನ್‌ 123ಎ, 153ಎ,153 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details