ಚಿಕ್ಕಮಗಳೂರು: ತಾಲೂಕಿನ ತಿಮ್ಮನಹಳ್ಳಿ ಗ್ರಾಮಕ್ಕೆ ಶಾಸಕ ಸಿ.ಟಿ.ರವಿ ಭೇಟಿ ನೀಡಿ ಕೀಲು ನೋವಿನಿಂದ ಬಳಲುತ್ತಿರುವ ಗ್ರಾಮಸ್ಥರ ಯೋಗಕ್ಷೇಮ ವಿಚಾರಿಸಿದರು.
ಕೀಲು ನೋವಿನಿಂದ ಬಳಲುತ್ತಿರುವ ಗ್ರಾಮಸ್ಥರ ಯೋಗಕ್ಷೇಮ ವಿಚಾರಿಸಿದ ಸಿ.ಟಿ.ರವಿ
ತಾಲೂಕಿನ ತಿಮ್ಮನಹಳ್ಳಿ ಗ್ರಾಮಕ್ಕೆ ಶಾಸಕ ಸಿ.ಟಿ.ರವಿ ಭೇಟಿ ನೀಡಿ ಕೀಲು ನೋವಿನಿಂದ ಬಳಲುತ್ತಿರುವ ಗ್ರಾಮಸ್ಥರ ಯೋಗಕ್ಷೇಮ ವಿಚಾರಿಸಿದರು.
ಕಳೆದ 23 ದಿನಗಳಿಂದ ಈ ಕಾಯಿಲೆ ಒಬ್ಬರಿಂದೊಬ್ಬರಿಗೆ ಹರಡುತ್ತ ಬಂದಿದೆ ಎಂಬ ಮಾಹಿತಿಯನ್ನು ವೈದ್ಯರು ಶಾಸಕ ಸಿ.ಟಿ.ರವಿ ಅವರಿಗೆ ನೀಡಿದ್ದು, ಈ ಗ್ರಾಮದಲ್ಲಿರುವ 120 ಮನೆಗಳಲ್ಲೂ ಈ ಕಾಯಿಲೆ ಹರಡಿದೆ. ಎಲ್ಲ ಮನೆಗಳಲ್ಲೂ ಒಬ್ಬರಲ್ಲ ಒಬ್ಬರು ರೋಗಿಗಳಿದ್ದಾರೆ. ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡು ಗ್ರಾಮಸ್ಥರ ಬಗ್ಗೆ ಎಚ್ಚರ ವಹಿಸಿ ಕಾಯಿಲೆ ಗುಣಪಡಿಸುವಂತೆ ಸೂಚನೆ ನೀಡಿದರು.
ಈ ವೇಳೆ ರೋಗಿಗಳ ಜೊತೆ ಚರ್ಚಿಸಿ ನಿಮಗೆ ಯಾವುದೆ ರೀತಿಯ ಸಮಸ್ಯೆ ಬಾರದಂತೆ ಆರೋಗ್ಯ ಕಾಪಾಡಿಕೊಳ್ಳಲು ಮುಂಜಾಗೃತ ಕ್ರಮದ ಬಗ್ಗೆ ಯೋಚಿಸಿ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಲು ಜಿಲ್ಲಾಡಳಿತದೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.