ಚಿಕ್ಕಮಗಳೂರು:ಜಿಲ್ಲೆಗೆ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗರ ಕಾರು ಪ್ರಪಾತಕ್ಕೆ ಬಿದ್ದಿದ್ದು, 7 ಜನರಿಗೆ ಗಂಭೀರ ಗಾಯವಾಗಿದೆ ಹಾಗೂ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಗೆ ಮಂಗಳೂರು ಮೂಲದ ಪ್ರವಾಸಿಗರು ಪ್ರವಾಸಕ್ಕೆಂದು ಕಾರಿನಲ್ಲಿ ಆಗಮಿಸಿದ್ದರು. ಚಿಕ್ಕಮಗಳೂರು ಜಿಲ್ಲೆಯ ಮಾಣಿಕ್ಯಧಾರ ತಿರುವಿನಲ್ಲಿ ಹೋಗುತ್ತಿದ್ದ ವೇಳೆ ದಟ್ಟ ಮಂಜು ಆವರಿಸಿದ್ದ ಕಾರಣ ಚಾಲಕನಿಗೆ ಕಾರು ನಿಯಂತ್ರಣಕ್ಕೆ ಸಿಗದೇ 100 ಅಡಿಯ ಪ್ರಪಾತಕ್ಕೆ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ 7 ಜನರಿಗೆ ಗಂಭೀರ ಗಾಯವಾಗಿದ್ದು, ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.