ಕರ್ನಾಟಕ

karnataka

ETV Bharat / state

ಮಾಣಿಕ್ಯಧಾರ ತಿರುವಿನಲ್ಲಿ ಪ್ರಪಾತಕ್ಕೆ ಬಿದ್ದ ಕಾರು: ಮಹಿಳೆ ಸಾವು, 7 ಮಂದಿ ಗಂಭೀರ

ಚಿಕ್ಕಮಗಳೂರು ಜಿಲ್ಲೆಯ ಮಾಣಿಕ್ಯಧಾರ ತಿರುವಿನಲ್ಲಿ ಹೋಗುತ್ತಿದ್ದ ಕಾರು ಪ್ರಪಾತಕ್ಕೆ ಬಿದ್ದಿದ್ದು, ಮಹಿಳೆ ಸಾವನ್ನಪ್ಪಿ 7 ಮಂದಿ ಗಾಯಗೊಂಡಿದ್ದಾರೆ.

By

Published : Jul 8, 2019, 8:00 PM IST

ಮಾಣಿಕ್ಯಧಾರ ತಿರುವಿನಲ್ಲಿ ಪ್ರಪಾತಕ್ಕೆ ಬಿದ್ದ ಕಾರು

ಚಿಕ್ಕಮಗಳೂರು:ಜಿಲ್ಲೆಗೆ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗರ ಕಾರು ಪ್ರಪಾತಕ್ಕೆ ಬಿದ್ದಿದ್ದು, 7 ಜನರಿಗೆ ಗಂಭೀರ ಗಾಯವಾಗಿದೆ ಹಾಗೂ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಾಣಿಕ್ಯಧಾರ ತಿರುವಿನಲ್ಲಿ ಪ್ರಪಾತಕ್ಕೆ ಬಿದ್ದ ಕಾರು

ಚಿಕ್ಕಮಗಳೂರು ಜಿಲ್ಲೆಗೆ ಮಂಗಳೂರು ಮೂಲದ ಪ್ರವಾಸಿಗರು ಪ್ರವಾಸಕ್ಕೆಂದು ಕಾರಿನಲ್ಲಿ ಆಗಮಿಸಿದ್ದರು. ಚಿಕ್ಕಮಗಳೂರು ಜಿಲ್ಲೆಯ ಮಾಣಿಕ್ಯಧಾರ ತಿರುವಿನಲ್ಲಿ ಹೋಗುತ್ತಿದ್ದ ವೇಳೆ ದಟ್ಟ ಮಂಜು ಆವರಿಸಿದ್ದ ಕಾರಣ ಚಾಲಕನಿಗೆ ಕಾರು ನಿಯಂತ್ರಣಕ್ಕೆ ಸಿಗದೇ 100 ಅಡಿಯ ಪ್ರಪಾತಕ್ಕೆ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ 7 ಜನರಿಗೆ ಗಂಭೀರ ಗಾಯವಾಗಿದ್ದು, ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.

ಮಂಗಳೂರು ಮೂಲದ ಸಮೀರಾ (30) ಮೃತ ದುರ್ದೈವಿಯಾಗಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ರಕ್ಷಣೆ ಮಾಡಿ ಜಿಲ್ಲಾ ಸರ್ಕಾರಿ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಇನ್ನು ಶಾಸಕ ಸಿ.ಟಿ.ರವಿ ಜಿಲ್ಲಾ ಸರ್ಕಾರಿ ಆಸ್ವತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸಿದರು.

For All Latest Updates

TAGGED:

ABOUT THE AUTHOR

...view details