ಕರ್ನಾಟಕ

karnataka

ಹೆಜ್ಜೇನು ದಾಳಿಗೆ ಚಿಕ್ಕಮಗಳೂರು ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಬಲಿ

ಚಿಕ್ಕಮಗಳೂರು ತಾಲೂಕಿನ ಕೃಷ್ಣಗಿರಿ ತೋಟದಲ್ಲಿ ಹೆಜ್ಜೇನು ದಾಳಿಗೆ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್​.ಭೋಜೆಗೌಡ ಮೃತಪಟ್ಟಿದ್ದಾರೆ.

By

Published : Apr 23, 2022, 4:02 PM IST

Published : Apr 23, 2022, 4:02 PM IST

Updated : Apr 23, 2022, 4:45 PM IST

ETV Bharat / state

ಹೆಜ್ಜೇನು ದಾಳಿಗೆ ಚಿಕ್ಕಮಗಳೂರು ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಬಲಿ

chikkamagaluru
ಕಾಫಿ ಮಂಡಳಿ ಅಧ್ಯಕ್ಷ

ಚಿಕ್ಕಮಗಳೂರು:ಹೆಜ್ಜೇನು ದಾಳಿಗೆ ಚಿಕ್ಕಮಗಳೂರು ಜಿಲ್ಲೆಯ ಕಾಫಿ ಮಂಡಳಿ ಮಾಜಿ ಅಧ್ಯಕ್ಷರು ಬಲಿಯಾದ ಘಟನೆ ನಡೆದಿದೆ. ಎಂ.ಎಸ್.ಭೋಜೆಗೌಡ (73) ಮೃತ ದುರ್ದೈವಿಯಾಗಿದ್ದು, ತಾಲೂಕಿನ ಕೃಷ್ಣಗಿರಿ ಕಾಫಿ ತೋಟದಲ್ಲಿ ಈ ದುರಂತ ಘಟನೆ ನಡೆದಿದೆ.

ಸಾವಿರಾರು ಹೆಜ್ಜೇನುಗಳು ದಾಳಿ ಮಾಡಿದ್ದರಿಂದ ಭೋಜೆಗೌಡರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭೋಜೇಗೌಡರು ಸತತ 2ನೇ ಬಾರಿಗೆ ಕಾಫಿ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. 1 ಬಾರಿ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿಯೂ ಎಂ.ಎಸ್. ಬೋಜೇಗೌಡ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ:ದೇಶದ ಎಲ್ಲ ಮುಸಲ್ಮಾನರು ರಾಷ್ಟ್ರ ದ್ರೋಹಿಗಳಲ್ಲ: ಕೆ.ಎಸ್.ಈಶ್ವರಪ್ಪ

Last Updated : Apr 23, 2022, 4:45 PM IST

ABOUT THE AUTHOR

...view details