ಕರ್ನಾಟಕ

karnataka

ನಕ್ಸಲ್ ಸಾವಿತ್ರಿ ಶೃಂಗೇರಿ ಕೋರ್ಟ್​ಗೆ ಹಾಜರು.. ಏ.8ರವರೆಗೆ ಪೊಲೀಸ್ ಕಸ್ಟಡಿಗೆ

By

Published : Apr 2, 2022, 1:49 PM IST

ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ ಸಾವಿತ್ರಿ ಇಂದು ಶೃಂಗೇರಿ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಏಪ್ರಿಲ್​​ 8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

chikkamagaluru-naxal-savitri-for-police-custody
ನಕ್ಸಲ್ ಸಾವಿತ್ರಿ ಶೃಂಗೇರಿ ನ್ಯಾಯಲಯಕ್ಕೆ ಹಾಜರು, ಪೊಲೀಸ್ ಕಸ್ಟಡಿ ವಶಕ್ಕೆ

ಚಿಕ್ಕಮಗಳೂರು: ಕಳೆದ ಎರಡು ತಿಂಗಳ ಹಿಂದೆ ಕೇರಳದಲ್ಲಿ ಬಂಧನಕ್ಕೊಳಗಾಗಿದ್ದ ನಕ್ಸಲ್ ಸಾವಿತ್ರಿಯನ್ನು ಜಿಲ್ಲೆಯ ಶೃಂಗೇರಿ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿ ನಕ್ಸಲ್ ಸಾವಿತ್ರಿಯನ್ನ ಏಪ್ರಿಲ್ 8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.

2001ರಿಂದಲೂ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ ಸಾವಿತ್ರಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸ ಸಮೀಪದವರು. ಅನೇಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ನಕ್ಸಲ್ ಸಾವಿತ್ರಿ ಮತ್ತು ಬಿ.ಜಿ. ಕೃಷ್ಣಮೂರ್ತಿಯನ್ನು ಕಳೆದ ಫೆಬ್ರವರಿಯಲ್ಲಿ ಕೇರಳ ಪೊಲೀಸರು ಬಂಧಿಸಿದ್ದರು. ಕಳೆದ ಫೆಬ್ರವರಿ 24ರಂದು ನ್ಯಾಯಾಲಯದ ವಿಚಾರಣೆ ಎದುರಿಸಿದ ಬಿ.ಜಿ. ಕೃಷ್ಣಮೂರ್ತಿ ಸದ್ಯ ನ್ಯಾಯಾಂಗ ಬಂಧನಲ್ಲಿದ್ದಾರೆ.

ಇದನ್ನೂ ಓದಿ:ಸರ್ಕಾರಿ ಶಾಲೆಯ ಅಡುಗೆ ಕೊಠಡಿಯಲ್ಲಿ ಗ್ಯಾಸ್​ ಲೀಕ್​ನಿಂದ ಅಗ್ನಿ ಅವಘಡ: ಅಡುಗೆ ಸಿಬ್ಬಂದಿ ಸಾವು

ABOUT THE AUTHOR

...view details