ಕರ್ನಾಟಕ

karnataka

By

Published : Sep 18, 2020, 10:53 PM IST

ETV Bharat / state

ಚಿಕ್ಕಮಗಳೂರು: 643 ಸೋಂಕಿತರು ಗುಣಮುಖ... 3 ಜನ ಬಲಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 643 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, 109 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಮೂವರು ಸಾವನ್ನಪ್ಪಿದ್ದಾರೆ.

ಜಿಲ್ಲಾ ಕೋವಿಡ್​ ಕೇಂದ್ರ
ಜಿಲ್ಲಾ ಕೋವಿಡ್​ ಕೇಂದ್ರ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 109 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ, 6,925ಕ್ಕೆ ಏರಿಕೆಯಾಗಿದೆ.

ಈ ದಿನ 643 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 5,320 ಜನ ಸೋಂಕಿತರು ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ. ಈ ದಿನ ಸೋಂಕಿಗೆ 3 ಜನರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 106ಕ್ಕೆ ಏರಿಕೆಯಾಗಿದೆ.

ಇಂದು ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್​ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,925ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1,499 ಸಕ್ರಿಯ ಪ್ರಕರಣಗಳಿವೆ.

ABOUT THE AUTHOR

...view details