ಕರ್ನಾಟಕ

karnataka

By

Published : Aug 17, 2020, 8:27 PM IST

ETV Bharat / state

ಪ್ರತಿಭಟನೆ ಮಾಡುವುದು ಅವರ ಕೆಲಸ, ಮಾಡಲಿ; ಕಾಂಗ್ರೆಸ್​ಗೆ ಸಚಿವ ಸಿ.ಟಿ. ರವಿ ಟಾಂಗ್

ಶೃಂಗೇರಿಯಲ್ಲಿ ಕೆಲವರು ಅಶಾಂತಿ ಮೂಡಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ನಾಳೆ ಕಾಂಗ್ರೆಸ್​​ನವರು ನಡೆಸಬೇಕೆಂದಿರುವ ಪ್ರತಿಭಟನಾ ನಿರ್ಧಾರಕ್ಕೆ ಸಚಿವ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ct ravi
ಸಚಿವ ಸಿ.ಟಿ.ರವಿ ಹೇಳಿಕೆ

ಚಿಕ್ಕಮಗಳೂರು:ನಗರದಲ್ಲಿ ಕೆಲವರು ಅಶಾಂತಿ ಮೂಡಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ಶಾಸಕ ರಾಜೇಗೌಡ ನೇತೃತ್ವದಲ್ಲಿ ನಾಳೆ ಪ್ರತಿಭಟನೆ ನಡೆಯಲಿದೆ. ಈ ಕುರಿತು ಸಚಿವ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದಾರೆ.

ಸಚಿವ ಸಿ.ಟಿ.ರವಿ ಹೇಳಿಕೆ

ನಗರದಲ್ಲಿ ಮಾತನಾಡಿದ ಸಿ.ಟಿ. ರವಿ, ಪ್ರತಿಭಟನೆ ಮಾಡುವುದು ಅವರ ಕೆಲಸ, ಮಾಡಲಿ. ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಅನ್ಯಕೋಮಿನ ಬ್ಯಾನರ್ ಹಾಕಿರುವ ವಿಚಾರವಾಗಿ ಪ್ರಾಥಮಿಕ ಸಾಕ್ಷಿಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಬಂಧಿಸುವವರೆಗೂ ಕಾಂಗ್ರೆಸ್​​ನವರು ಯಾರೂ ಮಾತನಾಡಿಲ್ಲ. ಆದರೆ ಈಗ ಮಾತನಾಡುತ್ತಿದ್ದಾರೆ. ಒಂದು ವೇಳೆ ಎಸ್​ಡಿಪಿಐ ಸಂಘಟನೆಯವರು ಮಾಡಿದ್ದರೆ, ಇವರು ಮುಜುಗರಕ್ಕೆ ಒಳಗಾಗಿ ಪ್ರತಿಭಟನೆ ಮಾಡುವ ಅವಕಾಶ ಕಳೆದುಕೊಳ್ಳುತ್ತಿದ್ದರು. ಯಾಕೆಂದರೆ ಅವರ ನೆಂಟರು ಸಿಕ್ಕಿ ಹಾಕಿಕೊಳ್ಳುತ್ತಾರೆ ನೋಡಿ ಎಂದು ವ್ಯಂಗ್ಯವಾಡಿದರು.

ಬಂಧಿತ ವ್ಯಕ್ತಿಯ ಹಿನ್ನೆಲೆ ತನಿಖೆ ಮಾಡಲು ಜಿಲ್ಲಾ ಎಸ್​​ಪಿ ಅವರಿಗೆ ಹೇಳಿದ್ದೇನೆ. ನಾವು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ABOUT THE AUTHOR

...view details