ಕರ್ನಾಟಕ

karnataka

ETV Bharat / state

ಈಟಿವಿ ಭಾರತ ಫಲಶೃತಿ.. ಪ್ರವಾಹ ಸಂತ್ರಸ್ತರನ್ನ ತಲುಪಿದ ಪರಿಹಾರ ಸಾಮಗ್ರಿಗಳು.. - ಪ್ರವಾಹ ಸಂತ್ರಸ್ತರಿಗೆ ಜಿಲ್ಲಾಡಳಿತ ನೆರವು

ಈಟಿವಿ ಭಾರತದ ವರದಿಯಿಂದ ಎಚ್ಚೆತ್ತ ಚಿಕ್ಕಮಗಳೂರು ಜಿಲ್ಲಾಡಳಿತ ಗೋದಾಮಿನಲ್ಲಿ ಕೊಳೆಯುತ್ತಿದ್ದ ಪ್ರವಾಹ ಸಂತ್ರಸ್ತರಿಗಾಗಿ ಸಂಗ್ರಹಿಸಿಟ್ಟಿದ್ದ ದಿನಬಳಕೆ ವಸ್ತುಗಳನ್ನ ಕೊನೆಗೂ ಅರ್ಹರಿಗೆ ತಲುಪಿಸುವ ಕೆಲಸ ಮಾಡಿದೆ.

ಪ್ರವಾಹ ಸಂತ್ರಸ್ತರನ್ನ ತಲುಪಿದ ಪರಿಹಾರ ಸಾಮಾಗ್ರಿಗಳು

By

Published : Nov 16, 2019, 7:08 PM IST

ಚಿಕ್ಕಮಗಳೂರು: ಪ್ರವಾಹ ಸಂತ್ರಸ್ತರ ನೆರವಿಗಾಗಿ ನೀಡಿದ್ದ ಪರಿಹಾರ ಸಾಮಗ್ರಿಗಳು ವಾರ್ತಾ ಇಲಾಖೆ ಗೋದಾಮಿನಲ್ಲಿ ಕೊಳೆಯುತಿದ್ದ ಬಗ್ಗೆ ಈಟಿವಿ ಭಾರತ ವರದಿ ಮಾಡಿತ್ತು. ಇದೇ ವರದಿಯಿಂದ ಈಗ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ.

ಪ್ರವಾಹ ಸಂತ್ರಸ್ತರನ್ನ ತಲುಪಿದ ಪರಿಹಾರ ಸಾಮಗ್ರಿಗಳು..

ಈ ವರ್ಷದಲ್ಲಿ ಸುರಿದ ಭಾರಿ ಮಳೆಗೆ ಮಲೆನಾಡಿನ ಜನರು ಬೆಚ್ಚಿ ಬಿದ್ದಿದ್ದರು. ಎಲ್ಲವನ್ನೂ ಕಳೆದುಕೊಂಡು ಜೀವ ಉಳಿಸಿಕೊಳ್ಳಲು ಉಟ್ಟ ಬಟ್ಟೆಯಲ್ಲಿ ಊರು ತೊರೆದಿದ್ದರು. ಮಲೆನಾಡಿಗರ ನೋವಿಗೆ ಕರಗಿದ ಕನ್ನಡಿಗರ ಜೀವ ತಮ್ಮ ಕೈಲಾದ ಸಹಾಯ ಮಾಡಿದ್ದರು. ಆದರೆ, ರಾಜ್ಯದ ಮೂಲೆ-ಮೂಲೆಗಳಿಂದ ಬಂದ ನೆರವನ್ನು ಸಂತ್ರಸ್ತರಿಗೆ ತಲುಪಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿತ್ತು.

ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಇರುವ ವಾರ್ತಾ ಇಲಾಖೆ ಗೋದಾಮಿನಲ್ಲಿ ರಾಶಿ-ರಾಶಿ ಪರಿಹಾರ ಸಾಮಗ್ರಿಗಳು ಹುಳು ತಿನ್ನುತ್ತಿದ್ದವು. ನಾಲ್ಕು ತಿಂಗಳಾಗಿದ್ದರೂ ನೆರವನ್ನು ನಿರಾಶ್ರಿತರಿಗೆ ತಲುಪಿಸುವಲ್ಲಿ ಅಧಿಕಾರಿಗಳು ವಿಫಲವಾಗಿದ್ದರು.

ಈ ಕುರಿತು ಈಟಿವಿ ಭಾರತ ಸುದ್ದಿ ಪ್ರಸಾರ ಮಾಡಿ, ಅಧಿಕಾರಿಗಳ ಕಣ್ಣು ತೆರೆಸುವ ಕೆಲಸ ಮಾಡಿತ್ತು. ಈ ಸುದ್ದಿ ಬಂದ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ವಾರ್ತಾ ಇಲಾಖೆಯ ಗೋದಾಮಿನಲ್ಲಿರಿಸಿದ್ದ ವಸ್ತುಗಳನ್ನು ಹೊರ ತೆಗೆದಿದೆ. ಎಲ್ಲಾ ವಸ್ತುಗಳನ್ನು ಲಾರಿಯಲ್ಲಿ ತುಂಬಿಸಿ ನಿರಾಶ್ರಿತರಿಗೆ ನೀಡುವ ಕೆಲಸಕ್ಕೆ ಕೈಹಾಕಿದೆ. ಈ ಮೂಲಕ ಈಟಿವಿ ಭಾರತ ವರದಿಯಿಂದ ಸಹೃದಯಿ ಕನ್ನಡಿಗರು ನೀಡಿದ್ದ ಪರಿಹಾರ ಸಾಮಗ್ರಿಗಳು ಪ್ರವಾಹ ಸಂತ್ರಸ್ತರಿಗೆ ತಲುಪಿವೆ.

ABOUT THE AUTHOR

...view details