ಕರ್ನಾಟಕ

karnataka

By

Published : Mar 18, 2019, 10:08 AM IST

ETV Bharat / state

ಅಬಕಾರಿ ಅಧಿಕಾರಿಗಳ ದಾಳಿ: 11.50 ಲಕ್ಷ ರೂ. ಮೌಲ್ಯದ ಮದ್ಯ ವಶ

ಚಿಕ್ಕಮಗಳೂರಿನಲ್ಲಿ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು 11.50 ಲಕ್ಷ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

11.50 ಲಕ್ಷ ರೂ. ಮೌಲ್ಯದ ಮದ್ಯ ವಶ

ಚಿಕ್ಕಮಗಳೂರು: ಅಬಕಾರಿ ಅಧಿಕಾರಿಗಳು ದಾಳಿ ಮಾಡಿ 11.50 ಲಕ್ಷ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಎನ್​​.ಆರ್​ ಪುರ ತಾಲೂಕಿನ ಹೊಡೆಯಾಲ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಎಂ.ಎಸ್.ಐ. ಎಲ್​​ ಮೇಲೆ ದಾಳಿ ಅಕ್ರಮ ಮದ್ಯ ವಶಕ್ಕೆ ಪಡೆದಿದ್ದಾರೆ.

ಅಬಕಾರಿ ಇನ್ಸ್‌ಪೆಕ್ಟರ್ ಹನುಮಂತಪ್ಪ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು,11.50 ಲಕ್ಷ. ರೂ. ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ತೆರಿಗೆ ಪಾವತಿಸದ ಹಾಗೂ ಬಿಯರ್​​​ನೊಂದಿಗೆ ಹೆಚ್ಚುವರಿಯಾಗಿ ದೊರೆತ ಮದ್ಯ ವಶಕ್ಕೆ ಪಡೆದಿದ್ದಾರೆ.

ಎಂ.ಎಸ್.ಐ.ಎಲ್ ಸಿಬ್ಬಂದಿ ದರ್ಶನ್, ಅನಿಲ್ ಪರಾರಿಯಾಗಿದ್ದಾರೆ. ಈ ಕುರಿತು ಎನ್.ಆರ್.ಪುರ ವಲಯ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ABOUT THE AUTHOR

...view details