ಕರ್ನಾಟಕ

karnataka

ETV Bharat / state

ಶೃಂಗೇರಿ ಶಾರದಾ ಪೀಠದಲ್ಲಿ ದೇವೇಗೌಡ ದಂಪತಿಯಿಂದ ವಿಶೇಷ ಪೂಜೆ

ಲೋಕಸಭಾ ಚುನಾವಣೆ ಬಳಿಕವೂ ಪೂಜೆ, ಹೋಮ-ಹವನ ಅಂತ ಓಡಾಡುತ್ತಿರುವ ಮಾಜಿ ಪ್ರಧಾನಿ ಕುಟುಂಬ- ನಿನ್ನೆ ಶೃಂಗೇರಿ ಶಾರದಾ ಪೀಠಕ್ಕೆ ಆಗಮನ- ಇಲ್ಲಿಯೇ ವಾಸ್ತವ್ಯ ಹೂಡಿದ್ದ ಹೆಚ್​ಡಿಡಿ ದಂಪತಿ- ಬೆಳಗ್ಗೆ ದೇವಿಯ ದರ್ಶನ ಪಡೆದು ವಿಶೇಷ ಪೂಜೆ

By

Published : May 16, 2019, 12:00 PM IST

ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುಟುಂಬ

ಚಿಕ್ಕಮಗಳೂರು:ಜಿಲ್ಲೆಯ ಶೃಂಗೇರಿ ಶಾರದಾ ಪೀಠಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಕಳೆದ ರಾತ್ರಿಯಿಂದ ಇಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.

ಬುಧವಾರ ರಾತ್ರಿ ದೇವಸ್ಥಾನಕ್ಕೆ ಆಗಮಿಸಿದ ಮಾಜಿ ದೇವೇಗೌಡ ದಂಪತಿ ರಾತ್ರಿ ಇಲ್ಲಿಯೇ ಉಳಿದುಕೊಂಡಿದ್ದರು. ಬೆಳಗ್ಗೆ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಬೆಳಗಿನ ಸುಪ್ರಭಾತ ಪೂಜೆಯಲ್ಲಿ ದೇವೇಗೌಡರಿಗೆ ಪತ್ನಿ ಚೆನ್ನಮ್ಮ ಸೇರಿದಂತೆ ಇತರರು ಸಾಥ್​ ನೀಡಿದರು.

ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಕುಟುಂಬ

ಪೂಜೆ ಬಳಿಕ ನರಸಿಂಹ ವನದಲ್ಲಿರುವ ಗುರು ನಿವಾಸಕ್ಕೆ ತೆರಳಿ ಶ್ರೀ ಜಗದ್ಗುರುಗಳನ್ನು ಭೇಟಿ ಮಾಡಿದ ಮಾಜಿ ಪ್ರಧಾನಿ ಕುಟುಂಬಸ್ಥರು ಆಶೀರ್ವಾದ ಪಡೆದರು. ಪ್ರಕೃತಿ ಚಿಕಿತ್ಸೆ ಮುಗಿಸಿ ಶೃಂಗೇರಿಗೆ ಆಗಮಿಸಿರುವ ಇವರು ಇಂದು ಶೃಂಗೇರಿಯಲ್ಲಿ ಎಲ್ಲ ಪೂಜಾ ಕಾರ್ಯಕ್ರಮಗಳನ್ನು ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.

ABOUT THE AUTHOR

...view details