ಚಿಕ್ಕಮಗಳೂರು: ಪ್ರವಾಸೋದ್ಯಮಕ್ಕೆ ನೆಚ್ಚಿನ ತಾಣ ಎಂದು ಹೆಸರುವಾಸಿಯಾದ ಚಿಕ್ಕಮಗಳೂರು ಜಿಲ್ಲೆಗೆ ಸಾವಿರಾರೂ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಒಂದು ಗಂಟೆಯಿಂದ ಚಿಕ್ಕಮಗಳೂರಿನಲ್ಲಿ ಟ್ರಾಫಿಕ್ ಜಾಮ್... ವಾಹನ ಸವಾರರು ಹೈರಾಣ - undefined
ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ಪರಿಣಾಮ ಕಳೆದ ಒಂದು ಗಂಟೆಯಿಂದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಚಿಕ್ಕಮಗಳೂರಿನಲ್ಲಿ ಟ್ರಾಫಿಕ್ ಜಾಮ್
ಜಿಲ್ಲೆಯ ಕೈಮರ ಚೆಕ್ ಪೋಸ್ಟ್ನಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ಮುಳ್ಳಯ್ಯನಗಿರಿ, ಕವಿಕಲ್ ಗಂಡಿ, ಹೊನ್ನಮ್ಮನ ಹಳ್ಳ, ದತ್ತಪೀಠದ ಮಾರ್ಗ ಸಂಪೂರ್ಣ ಜಾಮ್ ಆಗಿ ಸುಮಾರು 1 ಕಿ.ಮೀ.ನಷ್ಟು ದೂರ ವಾಹನಗಳು ನಿಂತಲ್ಲೇ ನಿಂತಿವೆ.
ಟ್ರಾಫಿಕ್ ಜಾಮ್ನಿಂದ ಪ್ರವಾಸಿಗರ ಜೊತೆಗೆ ಸ್ಥಳೀಯರು ಕೂಡ ಹೈರಾಣಾಗಿದ್ದಾರೆ. ಇನ್ನು, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ.